Advertisement

ಜೂ. 28 ರಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ಪಯಣ

03:45 AM Jun 26, 2017 | Team Udayavani |

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಸಂಬಂಧ ಯುಪಿಎ ಮಿತ್ರಕೂಟದ ಅಭ್ಯರ್ಥಿಯಾಗಿರುವ ಮೀರಾಕುಮಾರ್‌ ಅವರು ಜೂನ್‌ 28ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಆ ಸಂದರ್ಭದಲ್ಲಿ ಹಾಜರಿರಲು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಆರೋಗ್ಯ ಮಂದಿರ ಟ್ರಸ್ಟ್‌ ವತಿಯಿಂದ ಭಾನುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರೋಪ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಬೇಟಿ ಸಂದರ್ಭದಲ್ಲಿ ಸಾಧ್ಯವಾದರೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದೇನೆ. ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಬಗ್ಗೆ ಹೈಕಮಾಂಡ್‌ನಿಂದ ಒಪ್ಪಿಗೆ ಪಡೆಯಲಾಗುವುದು ಮತ್ತು ಪಕ್ಷ ಸಂಘಟನೆಯ ವಿಚಾರವನ್ನು ಚರ್ಚಿಸಲಿದ್ದೇವೆ ಎಂದರು.

ಸಚಿವ ಮಹದೇವ ಪ್ರಸಾದ್‌ ಅವರ ನಿಧನದಿಂದ ಖಾಲಿ ಇರುವ ಸ್ಥಾನ ಸೇರಿದಂತೆ ಎಚ್‌.ವೈ.ಮೇಟಿ ಹಾಗೂ ಡಾ.ಪರಮೇಶ್ವರ್‌ ಅವರ ಸ್ಥಾನ ಭರ್ತಿಗೆ ಸಂಪುಟ ವಿಸ್ತರಣೆ ಅಗತ್ಯವಿದೆ. ಪಕ್ಷದ ಹೈಕಮಾಂಡ್‌ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next