Advertisement

69ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ

11:21 AM Aug 13, 2017 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವರ್ಷ ರಾಜ್ಯದಲ್ಲಿ ಬರ ಇರುವುದರಿಂದ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಆದರೂ, ಪಕ್ಷದ ಮುಖಂಡರು, ಸಚಿವರು ಮುಖ್ಯಮಂತ್ರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

Advertisement

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಜೊತೆಯಾಗಿ ತೆರಳಿ ಮುಖ್ಯಮಂತ್ರಿಗೆ ಶುಭ ಕೋರಿದರು. ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಅಭಿಮಾನಿಗಳು ಮುಖ್ಯಮಂತ್ರಿ ನಿವಾಸ ಕಾವೇರಿಗೆ ತೆರಳಿ ಶುಭ ಕೋರಿದ್ದಾರೆ. 

ಮುಖ್ಯಮಂತ್ರಿಯವರು ರಾಯಚೂರಿಗೆ ಕಾಂಗ್ರೆಸ್‌ ಸಮಾವೇಶಕ್ಕೆ ತೆರಳಿ ಸಂಜೆ ವಾಪಸ್ಸಾಗಿದ್ದರಿಂದ ಅನೇಕ ಅಧಿಕಾರಿಗಳು ಮತ್ತು ಪಕ್ಷದ ನಾಯಕರು ರಾತ್ರಿವರೆಗೂ ಸಿಎಂ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next