Advertisement

CM Siddaramaiah ಯಾವುದಕ್ಕೂ ಜಗ್ಗುವುದಿಲ್ಲ: ಸಹೋದರ ಸಿದ್ದೇಗೌಡ

12:58 AM Aug 20, 2024 | Team Udayavani |

ಮೈಸೂರು: ನಮ್ಮಣ್ಣ ಯಾವ ತಪ್ಪೂ ಮಾಡಿಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅವ್ನು ಯಾವದಕ್ಕೂ ಜಗ್ಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಹೇಳಿದರು.

Advertisement

ಮುಡಾ ಹಗ ರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ-ಜೆಡಿಎಸ್‌ನವರ ಕೈವಾಡದಿಂದ ರಾಜ್ಯಪಾಲರು ಹೀಗೆ ಮಾಡ್ತಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ಹೇಳಿದಂತೆ ಕುಣಿಯುತ್ತಿದ್ದಾರೆ ಎಂದು ವಿರುದ್ಧ ಕಿಡಿಕಾರಿದರು.

ಅಷ್ಟು ಸುಲಭದಲ್ಲಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಅವ ತಪ್ಪು ಮಾಡಿದ್ದರೆ ರಾಜೀನಾಮೆ ಕೊಡುವ, ತಪ್ಪೇ ಮಾಡದಿದ್ದ ಮೇಲೆ ಯಾಕ್‌ ಕೊಡ್ತಾರೆ. ಅವರು ತಪ್ಪೇ ಮಾಡಿ ಲ್ವಲ್ಲ. 108 ಸಲ ನಾ ತಪ್ಪು ಮಾಡಿಲ್ಲ, ನಾ ಯಾರಿಗೂ ಜ ಗ್ಗೋದಿಲ್ಲ ಎಂದು ಅವರೇ ಹೇಳಿದ್ದಾರಲ್ಲ. ತಪ್ಪು ಮಾಡಿದ್ದರೆ ರಾಜೀನಾಮೆ ಕೇಳಲಿ. ಅದು ಬಿಟ್ಟು ರಾಜೀ ನಾಮೆ ಕೊಡಿ ಅಂದ್ರೆ ಹೆಂಗೆ ಎಂದು ಪ್ರಶ್ನಿಸಿದರು.

ನಮ್ಮ ತಂದೆ ಮಾಡಿರುವುದರಲ್ಲಿ ತಪ್ಪಿಲ್ಲ ಎಂಬುದು ನಮ್ಮ ತಾಯಿಯವರಿಗೂ ಗೊತ್ತಿದೆ. ಆದರೂ ನನ್ನ ವಿಚಾರದಲ್ಲಿ ಇವರ ಮೇಲೆ ಆರೋಪ ಬರುತ್ತಿದೆಯಲ್ಲ ಎಂಬ ಬೇಸರವೂ ಇದೆ. ಕಾನೂನು ಮೂಲಕ ಹೋರಾಟ ಮಾಡಿ ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. -ಡಾ. ಯತೀಂದ್ರ ಸಿದ್ದರಾಮಯ್ಯ, ಸಿಎಂ ಪುತ್ರ, ಎಂಎಲ್‌ಸಿ

Advertisement

ಪ್ರತಿಭಟನೆಗೆ ಬರದಿದ್ದರೆ ಗ್ಯಾರಂಟಿ ಸ್ಥಗಿತ: ಡಂಗೂರ!
ನಂಜನಗೂಡು: ಪ್ರತಿಭಟನೆಗೆ ಬಾರದಿದ್ದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ವಿಚಾರವಾಗಿ ಡಂಗೂರ ಸಾರಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸೋಮವಾರ ವೈರಲ್‌ ಆಗಿದೆ.

ನಂಜನಗೂಡು ತಾಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ಪಟ್ಟಣದಲ್ಲಿ ರಾಜ್ಯಪಾಲರ ವಿರುದ್ಧದ ಪ್ರತಿಭಟನೆಗೆ ಬಾರದಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ಡಂಗೂರ ಸಾರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ. ಕಾಂಗ್ರೆಸ್‌ ನಾಯಕರು ಜನರಿಗೆ ಗ್ಯಾರಂಟಿಗಳನ್ನು ನಿಲ್ಲಿಸುವ ಬೆದರಿಕೆಯೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಪ್ರತಿಭಟನೆ ಮಾಡಲು ಕರೆತರುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next