Advertisement

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

12:33 AM Sep 20, 2024 | Team Udayavani |

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಹೇಳಿದ್ದಾರೆ. ಪ್ರತೀ ಲೀಟರ್‌ ಮೇಲೆ 5 ರೂ. ಹೆಚ್ಚಳ ಮಾಡುವಂತೆ ರೈತರು ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

Advertisement

ಹಾಲಿನ ಬೆಲೆ ಏರಿಕೆ ಕುರಿತಂತೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿರುವ 27 ಲಕ್ಷ ಹಾಲು ಉತ್ಪಾದಕರ ಬೇಡಿಕೆ ಇದೆ. ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ಮುಂದಿಟ್ಟಿದ್ದೇವೆ. ಕೆಎಂಎಫ್‌ ಹಾಗೂ ಎಲ್ಲ ಒಕ್ಕೂಟದ ಅಧ್ಯಕ್ಷರ ಸಭೆ ನಡೆಸಿ ಕರೆದು ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.

ದರ ಏರಿಕೆ ಬಗ್ಗೆ ಸಿಎಂ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ಬಾರಿ 50 ಎಂ.ಎಲ್‌. ಹೆಚ್ಚಳ ಮಾಡಿ, ಅದರ ದರ ತೆಗೆದುಕೊಂಡಿದ್ದೇವೆ. 50 ಎಂ.ಎಲ್‌. ಹೆಚ್ಚಳದಿಂದ ಗ್ರಾಹಕರಿಗೆ ಹೊರೆಯಾಗಿಲ್ಲ. ಸಾಧಕ-ಬಾಧಕಗಳ ಕುರಿತಂತೆ ಸಿಎಂ ಜತೆ ಚರ್ಚಿಸಲಾಗುತ್ತದೆ. ಪ್ರತೀ ಲೀಟರ್‌ಗೆ 5 ರೂ. ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆಯಿದೆ. ರೈತರು ಸೂಚಿಸಿದ ದರವನ್ನೇ ಸಿಎಂ ಮುಂದೆ ಇಡಲಾಗುತ್ತಿದೆ. ಅನಂತರ ಅವರೇನು ತೀರ್ಮಾನ ತೆಗೆದುಕೊಳ್ಳುತಾರೋ ಕಾದು ನೋಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next