Advertisement

CM Siddu ನಮ್ಮ ತಪ್ಪಿಲ್ಲ ,ಬಿಜೆಪಿ ವೃಥಾ ಪ್ರತಿಭಟನೆ: ತಪ್ಪು ಸಾಬೀತಾದರೆ ಎಲ್ಲರ ಮೇಲೂ ಕ್ರಮ

01:07 AM Jul 11, 2024 | Team Udayavani |

ಮೈಸೂರು: ಮುಡಾ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿ(BJP) ಯವರು ರಾಜಕೀಯ ಕಾರಣಕ್ಕಾಗಿ ವಿವಾದ ಮಾಡುತ್ತಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ(Siddaramaiah) ಕಿಡಿಕಾರಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ನಮಗೆ ಕಾನೂನು ಪ್ರಕಾರ ಬದಲಿ ನಿವೇಶನ ಕೊಡಲಾಗಿದೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ? ಸುಮ್ಮನೇ ವಿವಾದ ಮಾಡುತ್ತಿದ್ದಾರೆ. ಬಿಜೆಪಿ(BJP) ಯವರು ಪ್ರತಿಭಟನೆ ಮಾಡುತ್ತೇವೆ, ಮುತ್ತಿಗೆ ಹಾಕುತ್ತೇವೆ ಅಂತ ಹೇಳಿದ್ದಾರೆ. ರಾಜಕೀಯ ಕಾರಣಕ್ಕಾಗಿ ವಿವಾದ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಡಾದಲ್ಲಿ ಶೇ. 50:50 ಅನುಪಾತ ರದ್ದುಪಡಿಸಲಾಗಿದೆ. ಈಗಾಗಲೇ ತನಿಖೆ ನಡೆಯುತ್ತಿರುವುದರಿಂದ ಪ್ರಾಧಿ ಕಾರ
ದಲ್ಲಿ ಆಗಿರುವ ನಿರ್ಣಯಗಳನ್ನು ಅಮಾನತಿನಲ್ಲಿರಿಸಲಾಗಿದೆ. ತಪ್ಪು ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳ ಲಾಗುತ್ತದೆ. ನನ್ನ ಪತ್ನಿಯ ವಿಚಾರವನ್ನು ರಾಜ ಕೀಯ ಕಾರಣಕ್ಕಾಗಿ ವಿವಾದ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next