Advertisement

ಮೀಸಲಾತಿ ವಿಚಾರ : ಸವಾಲುಗಳು ನನಗೆ ಹೊಸದೇನಲ್ಲ : ಬಿ ಎಸ್ ವೈ

06:04 PM Feb 13, 2021 | Team Udayavani |

ಮೈಸೂರು : ಎಲ್ಲರೂ ತಮ್ಮ ತಮ್ಮ ಸಮುದಾಯಕ್ಕೆ ನ್ಯಾಯ ಕೇಳುತ್ತಾರೆ. ಕೇಳುವುದು ಅವರ ಹಕ್ಕು, ಅದನ್ನು ಪರಿಶೀಲಿಸಿ ಅವರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

ಓದಿ : ಸಚಿವ ಶ್ರೀರಾಮಲು ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಿಪ್ಪೇರುದ್ರ ಸ್ವಾಮೀಜಿ

ಸವಾಲುಗಳು ಬಂದಾಗ ನನಗೆ ಖುಷಿಯಾಗುತ್ತದೆ, ಮತ್ತಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡುತ್ತೇನೆ. ನನಗೆ ಇಂತಹ ಸವಾಲುಗಳು ಹೊಸದಲ್ಲ.  ಎಲ್ಲವನ್ನು ನಾನು ನಿಭಾಯಿಸುತ್ತೇನೆ. ಎಂದು ಅವರು ಹೇಳಿದ್ದಾರೆ.

ಇನ್ನು, ವಿರೋಧ ಪಕ್ಷಗಳ ಟೀಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅವರ ಟೀಕೆಗಳಿಗೆ ಈಗ ಉತ್ತರ ನೀಡುವುದಿಲ್ಲ. ಬಜೆಟ್ ನಂತರವೇ ಹೇಗೆ ಉತ್ತರ ಕೊಡಬೇಕೋ ಹಾಗೆ ಉತ್ತರ ಕೊಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಓದಿ : ಬೈಡನ್ ದಂಪತಿಗಳು ತೆರೆದಿಟ್ಟ ಪ್ರೇಮ್ ಕಹಾನಿ..!

Advertisement

 

 

 

 

 

Advertisement

Udayavani is now on Telegram. Click here to join our channel and stay updated with the latest news.

Next