Advertisement

ಸರ್ಕಾರಿ ಬಂಗಲೆಯಲ್ಲಿ ವಾಸ್ತವ್ಯಕ್ಕೆ ಮುಂದಾದ ಸಿಎಂ

11:02 PM Jun 01, 2019 | Lakshmi GovindaRaj |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರಿ ಬಂಗಲೆಯಲ್ಲಿ ವಾಸ್ತವ್ಯ ಹೂಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಗೆ ಸದ್ಯದಲ್ಲೇ ಸ್ಥಳಾಂತರವಾಗಲಿದ್ದಾರೆ. ಅದಕ್ಕಾಗಿ ಸರ್ಕಾರಿ ಬಂಗಲೆ ನವೀಕರಣ ಮಾಡಲಾಗುವುದು ಎಂದು ತಿಳಿದು ಬಂದಿದೆ.

Advertisement

ರೇಸ್‌ಕೋರ್ಸ್‌ ರಸ್ತೆಯಲ್ಲಿ ತಾಜ್‌ ವೆಸ್ಟೆಂಡ್‌ ಹೋಟೆಲ್‌ ಹಿಂಭಾಗವಿರುವ ಸರ್ಕಾರಿ ಬಂಗಲೆಯಲ್ಲಿ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಾಸ್ತವ್ಯ ಇದ್ದರು. ನಂತರ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದಾಗ ಅದೇ ಬಂಗಲೆ ಕೊಡುವಂತೆ ಕೋರಿಕೆ ಸಲ್ಲಿಸಿದ್ದರು. ಆದರೆ, ಆ ಬಂಗಲೆಯನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ಗೆ ನೀಡಲಾಗಿತ್ತು.

ಇದರಿಂದ ಬೇಸರಗೊಂಡ ಯಡಿಯೂರಪ್ಪ ಅವರು ಸರ್ಕಾರಿ ಬಂಗಲೆಯೇ ಬೇಡ ಎಂದು ತಮ್ಮ ನಿವಾಸದಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಇದೀಗ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರಿ ಬಂಗಲೆಗೆ ಹೋಗಲು ನಿರ್ಧರಿಸಿದ್ದು, ರೇಸ್‌ಕೋರ್ಸ್‌ ರಸ್ತೆಯ ನಿವಾಸದಲ್ಲಿ ವಾಸ್ತವ್ಯ ಇರಲಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next