Advertisement

ಪರಿಣಿತರೊಂದಿಗೆ ಸಿಎಂ ಇಂದು ಸಂವಾದ

12:30 AM Mar 04, 2019 | |

ಬೆಂಗಳೂರು: ಸಮ್ಮಿಶ್ರ ಸರ್ಕಾರ ಯೋಜನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ವಿವಿಧ ಕ್ಷೇತ್ರಗಳ ಗಣ್ಯರ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಸಂವಾದ ನಡೆಸಲಿದ್ದಾರೆ.

Advertisement

ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿಕ್ಷಣ, ಕೈಗಾರಿಕೆ, ವಿಜ್ಞಾನ, ಸಮಾಜಸೇವೆ, ಐಟಿ-ಬಿಟಿ ಸೇರಿ ಹಲವು ಕ್ಷೇತ್ರಗಳ ಗಣ್ಯರು, ಪರಿಣಿತರಿಗೆ ಆಹ್ವಾನ ನೀಡಲಾಗಿದೆ.

ಸಾಲಮನ್ನಾ, ಬಡವರ ಬಂಧು, ಮುಖ್ಯಮಂತ್ರಿಯವರ ನವ ಬೆಂಗಳೂರು, ಕಾಂಪಿಟ್‌ ವಿತ್‌ ಚೀನಾ ಸೇರಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜಾರಿಯಾಗಿರುವ ಕಾರ್ಯಕ್ರಮಗಳ ಕುರಿತು ಗಣ್ಯರಿಂದ ಅಭಿಪ್ರಾಯ ಪಡೆಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next