Advertisement

ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗೆ ಸಿಎಂ ಉತ್ತರಿಸಲಿ: ಡಿ.ಕೆ.ಶಿವಕುಮಾರ್‌

09:41 PM Feb 05, 2022 | Team Udayavani |

ಬೆಂಗಳೂರು:ಹಿಜಾಬ್‌ ಧರಿಸುವವರು ಪಾಕಿಸ್ತಾನಕ್ಕೆ ಹೋಗಲಿ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗೆ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂವಿಧಾನದಂತೆ ಇವರು ಆಡಳಿತ ನಡೆಸುತ್ತಿದ್ದಾರಾ ಅಥವಾ ಅವರ ಪಕ್ಷದವರು ಹೇಳಿದಂತೆ ಆಡಳಿತ ಮಾಡುತ್ತಿದ್ದಾರಾ ಎಂದು ಅವರೇ ಹೇಳಬೇಕು ಎಂದು ತಿಳಿಸಿದರು.

ರಸ್ತೆಯಲ್ಲಿ ಹೋಗುವವರು ಮಾತನಾಡಿದ್ದಕ್ಕೆಲ್ಲಾ ನಾನು ಉತ್ತರ ನೀಡಲು ಸಾಧ್ಯವಿಲ್ಲ. ಪಕ್ಷದ ಅಧ್ಯಕ್ಷನಾಗಿ ಯಾವ ಸಮಯದಲ್ಲಿ ಎಷ್ಟು ಮಾತನಾಡಬಹುದೋ ಅಷ್ಟೇ ಮಾತನಾಡೋದು ಎಂದು ಹೇಳಿದರು.

ಇದನ್ನೂ ಓದಿ:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂ. ಅನುದಾನ ಬಿಡುಗಡೆ

ಕಾಂಗ್ರೆಸ್‌ ತೊರೆದು ಜೆಡಿಎಸ್‌ ಪಕ್ಷ ಸೇರುವುದಾಗಿ ಸಿ.ಎಂ ಇಬ್ರಾಹಿಂ ಹೇಳಿಕೆ ನಗ್ಗೆ ಪ್ರತಿಕ್ರಿಯಿಸಿ, ನಾನು ಪಕ್ಷದ ಸಂಘಟನೆ ವಿಚಾರದಲ್ಲಿ ಮಗ್ನನಾಗಿದ್ದು, ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next