Advertisement

ಇಂದು ಉಡುಪಿ ಜಿಲ್ಲೆಯ ವಿವಿಧ ಭಾಗಕ್ಕೆ ಸಿಎಂ ಭೇಟಿ, ಮಳೆಹಾನಿ ಪರಿಶೀಲನೆ

01:32 AM Jul 13, 2022 | Team Udayavani |

ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಉಡುಪಿ ಜಿಲ್ಲೆಯ ಮಳೆಯಿಂದ ಹಾನಿಯಾದ ಪ್ರದೇಶ, ಕಡಲ್ಕೊರೆತದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.

Advertisement

ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿ, ಅನಂತರ ವಿವಿಧ ಪ್ರದೇಶಗಳ ಪರಿಶೀಲನೆಗೆ ತೆರಳುವರು. ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳ ಭೇಟಿ ನೀಡಿ, ವಾಪಸ್‌ ಉಡುಪಿ ಜಿಲ್ಲೆಗೆ ಆಗಮಿಸಿ ಮರವಂತೆಯಲ್ಲಿ ಆಗಿರುವ ಕಡಲ್ಕೊರೆತವನ್ನು ವೀಕ್ಷಿಸುವರು. ಬಳಿಕ ಕಾಪು ತಾಲೂಕಿನ ಮೂಳೂರು ತೊಟ್ಟಂನಲ್ಲಿ ಕಡಲ್ಕೊರೆತ ಪ್ರದೇಶ ವೀಕ್ಷಿಸಿ ಮಂಗಳೂರು ಮೂಲಕ ಬೆಂಗಳೂರಿಗೆ ವಾಪಸಾಗುವರು.

ರೈತರಿಗೆ ಪರಿಹಾರದ ಚೆಕ್‌ ವಿತರಿಸುವ ಜತೆಗೆ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಅನುದಾನ ಘೋಷಿಸುವ ಸಾದ್ಯತೆ ಇದೆ. ಮುಖ್ಯಮಂತ್ರಿಯವರ ಜತೆಗೆ ಕಂದಾಯ ಸಚಿವ ಆರ್‌. ಅಶೋಕ್‌, ಕರಾವಳಿಯ ಮೂರು ಜಿಲ್ಲೆಗಳ ಉಸ್ತುವಾರಿ ಸಚಿವರಾದ ವಿ.ಸುನಿಲ್‌ ಕುಮಾರ್‌, ಎಸ್‌.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸ್ಥಳೀಯ ಶಾಸಕರು ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next