Advertisement

ಸಿಎಂ ಯಡಿಯೂರಪ್ಪ ಬಲಹೀನರಾಗಿಲ್ಲ: ಕಟೀಲ್‌

11:32 PM Sep 09, 2019 | Team Udayavani |

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಮ್ಮೆಲ್ಲರ ನಾಯಕ. ಅವರ ಮಾರ್ಗದರ್ಶನದಂತೆ ನಾವೆಲ್ಲರೂ ಅವರ ಕೈ ಕೆಳಗಡೆ ಕೆಲಸ ಮಾಡುತ್ತಿದ್ದೇವೆ. ಅವರನ್ನು ಬಲಹೀನರನ್ನಾಗಿ ಮಾಡಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಿ ಮತ್ತು ಪೂರ್ಣ ಪ್ರಮಾಣದಲ್ಲಿ ಸಂಪುಟ ವಿಸ್ತರಿಸದೆ ಅವರನ್ನು ಬಹೀನರನ್ನಾಗಿ ಮಾಡಲಾಗಿದೆ ಎಂಬುದು ಶುದ್ಧ ಸುಳ್ಳು. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿದ್ದಾರೆ. ಅಂದ ಬಳಿಕ ಅವರು ಹೇಗೆ ಬಲಹೀನರಾಗುತ್ತಾರೆ ಎಂದು ಪ್ರಶ್ನಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಸಂಪೂರ್ಣ ಬಹುಮತ ಸಿಕ್ಕಿಲ್ಲ. ನಮಗೆ ಪೂರ್ಣ ಬಹುಮತ ಕೊಟ್ಟಿದ್ದರೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಲು ಬಿಡುತ್ತಿರಲಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ಅನರ್ಹತೆಯಿಂದಾಗಿ ಸದ್ಯ ನಾವು ಸರ್ಕಾರ ರಚಿಸಿದ್ದೇವೆ. ಆದ್ದರಿಂದ ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗಿಲ್ಲ. ಜತೆಗೆ ಅನರ್ಹ 17 ಶಾಸಕರ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next