Advertisement

ಬಿಜಿಎಸ್ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಯಡಿಯೂರಪ್ಪ

01:12 PM May 17, 2021 | Team Udayavani |

ಬೆಂಗಳೂರು :  ಬಿಜಿಎಸ್ ಆಸ್ಪತ್ರೆ ವತಿಯಿಂದ ಆಕ್ಸಿಜನ್, ಐಸಿಯು, ಸಾಮಾನ್ಯ ಬೆಡ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಹಸಿರು ಪ್ರತಿಷ್ಠಾನದಿಂದ 2 ಸಾವಿರ ಗಿಡಗಳನ್ನ ನೆಡಲಾಗಿದೆ. ಈ ಕಾರಣದಿಂದ  ನಿರ್ಮಲಾನಂದ ಶ್ರೀಗಳು, ಪ್ರಕಾಶ್ ಸ್ವಾಮೀಜಿ ಅವರಿಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ,

Advertisement

ಬಿಜಿಎಸ್ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ್ದು ಖುಷಿ ತಂದಿದೆ. ನಾಡಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆ ಮಾಡಲಾಗಿದೆ. ಜಾತ್ಯಾತೀತವಾಗಿ ಶಿಕ್ಷಣ ಬಾಗಿಲು ತೆರೆದಿದೆ. ಉನ್ನತ ಶಿಕ್ಷಣ ಜೊತೆಗೆ ಆಧುನಿಕತೆಯನ್ನ ಹೊಂದಿದೆ. ಕಡು ಬಡವರಿಗೂ ಸುಲಭ ದರದಲ್ಲಿ ಚಿಕಿತ್ಸೆ ದೊರೆಯುತ್ತಿದೆ. ಬಿಜಿಎಸ್ ಸಂಸ್ಥೆ ಸರ್ಕಾರದೊಂದಿಗೆ ಸಹಕಾರ ನೀಡಿದೆ ಎಂದಿದ್ದಾರೆ.

ಕೋವಿಡ್ ಕೇರ್ ಆರಂಭಿಸಿರೋದು, ಸಂಸ್ಥೆಯ ಮಾನವೀಯತೆ ಕಂಡು ಬರ್ತಿದೆ. ನಿರ್ಮಲಾನಂದ ಶ್ರೀಗಳಿಗೆ ಗೌರವ ಅರ್ಪಿಸುತ್ತೇನೆ. ಕಳೆದ ಮೂರು ವರ್ಷದಿಂದ ಹಸಿರು ಪ್ರತಿಷ್ಠಾನ ಕೆಲಸ ಮಾಡ್ತಿದೆ. ಸಾಮೂಹಿಕವಾಗಿ ಗಿಡಗಳನ್ನ ನೆಡಲಾಗ್ತಿದೆ. ಮನು ಕುಲದ ಒಳಿತಿಗೆ ಉತ್ತಮ ಕೆಲಸ ಮಾಡುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಜನರ ಸಹಕಾರ ಅತ್ಯಗತ್ಯ. ಆಸ್ಪತ್ರೆ ಕೋವಿಡ್ ಕೇರ್ ಸೆಂಟರ್ ಎಲ್ಲರಿಗೂ ಮಾದರಿಯಾಗಲಿ ಎಂದಿದ್ದಾರೆ.

Advertisement

ಇದೇ ವೇಳೆ ನಿರ್ಮಲಾನಂದ ಶ್ರೀಗಳು ಮಾತನಾಡಿದ್ದು,  ಬಿಜಿಎಸ್ ಮಠದಿಂದ ಹೊಸ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಳೆದ ಒಂದು ವರ್ಷದಿಂದ ಕೋವಿಡ್ ಕಾಣಿಸಿಕೊಂಡಿದೆ. ಕೋವಿಡ್ ರೋಗಿಗಳನ್ನ ಟ್ರೀಟ್ ಮಾಡುವ ಕೆಲಸ ಮಾಡ್ತಿದ್ದೇವೆ. ಇದಕ್ಕಾಗಿ ಆಸ್ಪತ್ರೆಯ 75 ರಷ್ಟು ಬೆಡ್ ಮೀಸಲಿಟ್ಟಿದ್ದೇವೆ. ಎಲ್ಲೆಡೆ ಆಕ್ಸಿಜನ್ ಕೊರತೆ ಇದೆ. ಆಕ್ಸಿಜನ್ 13 kL ಕೆಪಾಸಿಟಿ ಟ್ಯಾಂಕ್ ಉದ್ಘಾಟನೆ ಮಾಡಲಾಗಿದೆ. ಪ್ರಾರಂಭದಲ್ಲಿ ಸೋಶಿಯಲ್ ಡಿಸ್ಟೆನ್ಸ್, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿತ್ತು.
ಈ ಸಮಯದಲ್ಲಿ ಕೆಲಸ ಮಾಡ್ತಿರೋ ಆರೋಗ್ಯ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next