Advertisement

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ‌

04:31 PM Jun 12, 2021 | Team Udayavani |

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದರು. ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ಜಾಗದ ಪರಿಶೀಲನೆ ನಡೆಸಿದರು.ಇದೇ ವೇಳೆ ಏರ್ ಪೋರ್ಟ್ ಪ್ಯಾಸೆಂಜರ್ ಟರ್ಮಿನಲ್, ಎಟಿಸಿ ಕಟ್ಟಡದ ವಿನ್ಯಾಸ ಆನಾವರಣ ಮಾಡಿದರು.

Advertisement

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 384 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಮಾಡಲಾಗುತ್ತಿದೆ. ಎರಡು ಹಂತದಲ್ಲಿ ಏರ್ ಪೋರ್ಟ್ ಕಾಮಗಾರಿಯನ್ನು ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ರನ್ ವೇ ಕೆಲಸ ನಡೆಯುತ್ತಿದ್ದು, 2 ನೇ ಹಂತದಲ್ಲಿ ಪ್ಯಾಸೆಂಜರ್ ಟರ್ಮಿನಲ್ ಹಾಗೂ ಎಟಿಸಿ ಕಟ್ಟಡ ನಿರ್ಮಿಸಲಾಗುತ್ತದೆ. ವಿಮಾನ ನಿಲ್ದಾಣ ಪೂರ್ಣಗೊಂಡರೆ ಶಿವಮೊಗ್ಗ ಜಿಲ್ಲೆಗೆ ಅನುಕೂಲವಾಗುತ್ತದೆ. 2022 ರ ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ:ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಹಾಸನ ಜಿಲ್ಲೆಯಲ್ಲೂ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಶೀಘ್ರದಲ್ಲಿಯೇ ದೇವೆಗೌಡರ ಜೊತೆ ಹೋಗಿ, ಅದಕ್ಕೂ ಚಾಲನೆ ನೀಡುತ್ತೇನೆ ಎಂದ ಸಿಎಂ ಬಿಎಸ್ ವೈ ಹೇಳಿದರು.

ಸಿಎಂ ಯಡಿಯೂರಪ್ಪಗೆ ನಗರಾಭಿವೃದ್ಧಿ ಸಚಿವ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ ಸಾಥ್ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next