Advertisement

ಸಿಎಂಬಿ ರಚನೆ: ಇಂದು ವಿಚಾರಣೆ

06:00 AM May 03, 2018 | Team Udayavani |

ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ (ಸಿಎಂಬಿ) ರಚನೆ ವಿಚಾರ, ಗುರುವಾರ ಸುಪ್ರೀಂಕೋರ್ಟ್‌ ಮುಂದೆ ಬರಲಿದೆ. ಮುಖ್ಯ ನ್ಯಾ. ದೀಪಕ್‌ ಮಿಶ್ರಾ ನೇತೃತ್ವದ ಪೀಠದ ಮುಂದೆ ನಡೆಯಲಿರುವ ವಿಚಾರಣೆ ವೇಳೆ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಸದ್ಯ ನೀಡಲಾಗಿರುವ ಅವಧಿಯನ್ನು ವಿಸ್ತರಿಸುವಂತೆ ಕೋರುವ ಸಾಧ್ಯತೆ ಇದೆ. 

Advertisement

ಕರ್ನಾಟಕದಲ್ಲಿ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಬಳಿಕವೇ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಅವಕಾಶ ಮಾಡಿಕೊಡಬೇಕು ಎಂದು ಹಿಂದಿನ ವಿಚಾರಣೆ ವೇಳೆ ಕೇಂದ್ರ ಮನವಿ ಮಾಡಿಕೊಂಡಿತ್ತು. ಅದಕ್ಕೆ ಒಪ್ಪದೇ ಇದ್ದ ಮಿಶ್ರಾ ಮೇ.3ರ ಗಡುವು ನೀಡಿದ್ದರು. ಇದರ ಹೊರತಾಗಿಯೂ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಹಿರಿಯ ಅಧಿಕಾರಿಗಳ  ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಮಂಡಳಿ ರಚನೆಗೆ ಸಂಬಂಧಿಸಿದ ಕರಡು ನಿಯಮಗಳು ಸಿದ್ಧಗೊಂಡಿವೆ. 

Advertisement

Udayavani is now on Telegram. Click here to join our channel and stay updated with the latest news.

Next