Advertisement

ಸಿಎಂ ಘೋಷಣೆ ಕುತೂಹಲ : ಡಿಕೆಶಿ ತವರು ಜಿಲ್ಲೆಯಲ್ಲಿ ಹೈ ಅಲರ್ಟ್

05:16 PM May 17, 2023 | Team Udayavani |

ರಾಮನಗರ: ಮುಖ್ಯಮಂತ್ರಿ ಯಾರು ಅನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಇದೆ. ಕೊನೆ ಕ್ಷಣದ ವರೆಗೂ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬಹುತೇಕ ಸಿಎಂ ಸ್ಥಾನ ಕೈತಪ್ಪಿದೆ ಎನ್ನಲಾಗಿದ್ದು ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಡಿಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Advertisement

ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆಗಳು ಇವೆ. ಇದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಂದೇಶ ರವಾನಿಸಲಾಗಿದೆ. ರಾಮನಗರದ ಐಜೂರು ವೃತ್ತದಲ್ಲಿ ಒಂದು ಕೆಎಸ್ಆರ್ ಪಿ ತುಕಡಿ, ಒಬ್ಬರು ಸಬ್ ಇನ್ ಸ್ಪೆಕ್ಟರ್ ಹಾಗೂ ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next