Advertisement

MUDA CASE: ಸಿಎಂ ಮೇಲ್ಮನವಿ ತಪ್ಪಲ್ಲ; ಸಚಿವ ಬೈರತಿ ಸುರೇಶ್‌

12:03 AM Oct 26, 2024 | Team Udayavani |

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಮೇಲ್ಮನವಿ ಸಲ್ಲಿಸಿದ್ದರಲ್ಲಿ ತಪ್ಪೇನಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಕೇಳಿದರು.

Advertisement

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಡಾ ಪ್ರಕರಣದ ವಿಚಾರವಾಗಿ ಈಗಿರುವುದರಲ್ಲಿ ಸಮಸ್ಯೆ ಇದೆ ಅಂತ ಕಾಲಮಿತಿಯಲ್ಲೇ ಮೇಲ್ಮನವಿ ಸಲ್ಲಿಸಲಾಗಿದೆ. ಇದರಲ್ಲಿ ತಪ್ಪೇನಿದೆ? ಹೆಚ್ಚು ಸಮಯವೇನೂ ತೆಗೆದುಕೊಂಡಿಲ್ಲ. ತಿಂಗಳು ಕಾಲಾವಕಾಶ ನೀಡಲಾಗಿತ್ತು. ಅಷ್ಟರಲ್ಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪ್ರಕರಣ ಸಂಬಂಧ ಇ.ಡಿ. ನೀಡಿದ ನೋಟಿಸ್‌ಗೆ ಮುಖ್ಯಮಂತ್ರಿ ಅವರ ಪತ್ನಿ ಹಾಜರಾಗಿದ್ದಾರೆ. ಏನು ಹೇಳಿದ್ದಾರೆ ಅಂತ ಗೊತ್ತಿಲ್ಲ ಎಂದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next