Advertisement

CM ಕುರ್ಚಿ ಮೇಲಿರೋದು ‘ಟಗರು’ ಅಲ್ಲಾಡಿಸಲು ಆಗಲ್ಲ: ಜಮೀರ್‌

01:21 AM Oct 07, 2024 | Team Udayavani |

ದಾವಣಗೆರೆ: ಮುಖ್ಯಮಂತ್ರಿ ಕುರ್ಚಿಯಲ್ಲಿ ಟಗರು ಗಟ್ಟಿಯಾಗಿ ಕುಳಿತಿದೆ. ಅದನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲ ಜಾತಿಯವರಿಗೂ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಆದರೆ ಈ 5 ವರ್ಷದ ಅವ ಧಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿಎಂ ಹುದ್ದೆಯಿಂದ ಟಗರನ್ನು (ಸಿದ್ದರಾಮಯ್ಯ) ಅಲ್ಲಾಡಿಸಲು ಸಾಧ್ಯವೇ ಇಲ್ಲ. ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರೇ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂಬುದಾಗಿ ಹೇಳಿದ್ದಾರೆ. ಹಾಗಾಗಿ ಬೇರೆ ಮುಖ್ಯಮಂತ್ರಿ ಬಗ್ಗೆ ಮಾತೇ ಇಲ್ಲ. ದೇಶದಲ್ಲಿ ಸಿದ್ದರಾಮಯ್ಯ ಅವರಷ್ಟು ಜನಪ್ರಿಯ ವ್ಯಕ್ತಿ ಯಾರೂ ಇಲ್ಲ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಗಿಂತಲೂ ನಮ್ಮ ಸಿದ್ದರಾಮಯ್ಯ ಬಹಳ ಪ್ರಸಿದ್ಧಿ. ಬೇಕಾದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಪ್ರಧಾನಿ ಕಾರ್ಯಕ್ರಮ ಮಾಡಿ. ಸಿದ್ದರಾಮಯ್ಯ ಕಾರ್ಯಕ್ರಮಕ್ಕೇ ಜನ ಹೆಚ್ಚು ಸೇರುವುದು. ಸ್ವಯಂ ಪ್ರೇರಿತವಾಗಿ ಜನ ಸೇರುವುದು ಸಿದ್ದರಾಮಯ್ಯ ಸಲುವಾಗಿಯೇ. ಏಕೆಂದರೆ ನಮ್ಮ ಟಗರು ಯಾವತ್ತಿದ್ದರೂ ಟಗರು ಎಂದು ಹೇಳಿದರು.

ಮುಡಾ ವಿಚಾರದ ಬಗ್ಗೆ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಸರಿಯಾಗಿಯೇ ಹೇಳಿದ್ದಾರೆ. ಅವರು ಮುಡಾ ಸದಸ್ಯರಾಗಿದ್ದವರು. ಹಾಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಜಾಮೀನು ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಡುತ್ತಾರಾ ಎಂದು ಪ್ರಶ್ನಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next