Advertisement

ರೈತರಿಗೆ ಹೊಸ ಸಾಲಕ್ಕೆ ಸಿಎಂ ಚಾಲನೆ

10:08 AM Jan 06, 2022 | Team Udayavani |

ಕಲಬುರಗಿ: ಮಂಗಳವಾರ ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಲ ಮನ್ನಾ ರೈತರಿಗೆ ಹೊಸದಾಗಿ ಬೆಳೆ ಸಾಲ ವಿತರಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

Advertisement

20 ಕೋ.ರೂ ವೆಚ್ಚದ ಡಿಸಿಸಿ ಬ್ಯಾಂಕ್‌ನ ನೂತನ ಕಟ್ಟಡಕ್ಕೆ ಅಡಿಗಲ್ಲು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಎಟಿಎಂ ವಿತರಣಾ ಕಾರ್ಯಕ್ರಮದಲ್ಲೇ ಅಫ‌ಜಲಪುರ ತಾಲೂಕಿನ ಭೈರಾಮಡಗಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಂಕೇತಿಕವಾಗಿ ಚೆಕ್‌ ವಿತರಿಸುವ ಮುಖಾಂತರ ಚಾಲನೆ ನೀಡಿದ ಅವರು, ಸಮರ್ಪಕವಾಗಿ ಎಲ್ಲ ರೈತರಿಗೆ ಬಡ್ಡಿ ರಹಿತ ಸಾಲ ತಲುಪಬೇಕೆಂದರು.

ಕೇಂದ್ರದ ಸಚಿವ ಭಗವಂತ ಖೂಬಾ, ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಬ್ಯಾಂಕ್‌ನ ಅಧ್ಯಕ್ಷ ರಾಜಕುಮಾರ ಪಾಟೀಲ್‌ ತೇಲ್ಕೂರ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ, ಸಂಸದ ಡಾ| ಉಮೇಶ ಜಾಧವ್‌, ಶಾಸಕರಾದ ಸುಭಾಷ ಆರ್‌. ಗುತ್ತೇದಾರ್‌, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್‌, ಡಾ. ಅವಿನಾಶ ಜಾಧವ್‌, ಶಶೀಲ್‌ ನಮೋಶಿ, ಬ್ಯಾಂಕ್‌ನ ಎಂಡಿ ಚಿದಾನಂದ ನಿಂಬಾಳ, ಉಪಾಧ್ಯಕ್ಷ ಸುರೇಶ ಸಜ್ಜನ್‌ ಸೇರಿದಂತೆ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next