Advertisement

ಉತ್ತರಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಎಂ ತಾತ್ವಿಕ ಒಪ್ಪಿಗೆ?

08:57 PM Sep 16, 2022 | Shreeram Nayak |

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ.

Advertisement

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಬಸವರಾಜ ಬೊಮ್ಮಾಯಿ ಶುಕ್ರವಾರ ಅನೌಪಚಾರಿಕ ಭೇಟಿ ಮಾಡಿದ್ದಸಮದರ್ಭದಲ್ಲಿ ಸದನದಲ್ಲಿ ಗುರುವಾರ ಪ್ರಸ್ತಾಪವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡದಿರುವ ಬಗ್ಗೆ ತಿಳಿಸಲಾಗಿದೆ.

ಅದಕ್ಕೆ ಉತ್ತರಿಸಲು ಆರೋಗ್ಯ ಸಚಿವ ಡಾ. ಸುಧಾಕರ್‌ ಕೂಡ ಅನಾರೋಗ್ಯದ ಕಾರಣದಿಂದ ಸದನದಲ್ಲಿ ಹಾಜರಿರಲಿಲ್ಲ. ಉತ್ತರ ಕನ್ನಡದಲ್ಲಿ ಆಸ್ಪತ್ರೆ ನಿರ್ಮಾಣ ಅಗತ್ಯವಾಗಿದೆ. ಜನರು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ಆರ್ಥಿಕ ಇಲಾಖೆ ಮೂಲಕ ಒಪ್ಪಿಗೆ ದೊರಕಿಸುವಂತೆ ಕೋರಿದರು.

ಅದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ಸೂಚಿಸಿದ್ದು, ಅಧಿಕಾರಿಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next