Advertisement

ಉತ್ತರ ಕರ್ನಾಟಕಕ್ಕೆ ಸಿಎಂ ಅನ್ಯಾಯ:ಶೆಟ್ಟರ್‌ ಆರೋಪ

06:55 AM Nov 29, 2018 | |

ಬೆಂಗಳೂರು:ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲ ಯೋಜನೆಗಳನ್ನು ಹಾಸನ,ಮಂಡ್ಯ ರಾಮನಗರ ಜಿಲ್ಲೆಗಳಿಗೆ ತೆಗೆದುಕೊಂಡು ಹೋಗುತ್ತಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯಲ್ಲಿ 4 ಸಾವಿರ ಕೋಟಿ ರೂಪಾಯಿ ಯೋಜನೆಗಳನ್ನು ಮೂರು ಜಿಲ್ಲೆಗಳಿಗೆ ಮಾತ್ರ ನೀಡಲಾಗಿದ್ದು, ರಾಜ್ಯದ ಬೇರೆ ಜಿಲ್ಲೆಗಳಿಗೆ ಯಾವುದೇ ಅನುದಾನ ನೀಡುತ್ತಿಲ್ಲ. ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ನಡೆದ ಐದಾರು ಸಂಪುಟ ಸಭೆಗಳಲ್ಲಿ ಒಪ್ಪಿಗೆ ಪಡೆದ ಶೇ. 80 ರಷ್ಟು ಯೋಜನೆಗಳು ಮೂರು ಜಿಲ್ಲೆಗಳಿಗೆ ಮಾತ್ರ ಸೇರಿವೆ. 

ಮಹದಾಯಿ ಯೋಜನೆ ವಿಚಾರದಲ್ಲಿ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳದೇ ವಿಳಂಬ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next