Advertisement

ಸಿಎಂ ಹೇಳಿಕೆ : ಜಮೀರ್ ಅಹಮದ್ ಗೆ ಬಿಸಿ ಮುಟ್ಟಿಸಿದ ಹೈಕಮಾಂಡ್

09:23 PM Jul 25, 2022 | Team Udayavani |

ಬೆಂಗಳೂರು : ಮುಂದಿನ ಸಿಎಂ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ಪಕ್ಷಕ್ಕೆ ತೀವ್ರ ಇರಿಸು ಮುರಿಸು ಉಂಟು ಮಾಡಿದ್ದ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸೋಮವಾರ ಎಐಸಿಸಿ ತಾಕೀತು ಮಾಡಿ ನೋಟಿಸ್ ನೀಡಿದೆ.

Advertisement

ಮುಂದಿನ ಮುಖ್ಯಮಂತ್ರಿ ಹೇಳಿಕೆಗೆ ಸಂಬಂಧಿಸಿ ಜಮೀರ್ ಅಹಮದ್ ಗೆ ರಾಜ್ಯ ಉಸ್ತುವಾರಿ ಸುರ್ಜೆವಾಲ ಎಚ್ಚರಿಕೆ ಪತ್ರ ನೀಡಿದ್ದು, ಪಕ್ಷದ ಶಿಸ್ತು, ಲಕ್ಷಣ ರೇಖೆ ದಾಟದಂತೆ ಸೂಚನೆ ನೀಡಲಾಗಿದೆ. ಇತ್ತೀಚೆಗಿನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಭವಿಷ್ಯದಲ್ಲಿ ಹೇಳಿಕೆ ನೀಡುವಾಗ ಎಚ್ಚರ ವಹಿಸಬೇಕು ಮತ್ತು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ದೃಢವಾಗಿ ಅಂಟಿಕೊಳ್ಳಬೇಕು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ ಎಂಬ ಡಿ.ಕೆ.ಶಿವಕುಮಾರ್ ಎಚ್ಚರಿಕೆಗೆ ಜಮೀರ್ ಸೆಡ್ಡು ಹೊಡೆದು ‘’ನನಗೆ ವ್ಯಕ್ತಿ ಪೂಜೆಯೂ ಮುಖ್ಯ, ಪಕ್ಷ ಪೂಜೆಯೂ ಮುಖ್ಯ’’ ಎಂದಿದ್ದರು. ”ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಚಾಲನೆ ಕೊಟ್ಟಿದ್ದೇ ಡಿ.ಕೆ.ಶಿವಕುಮಾರ್. ಇದಾದ ಬಳಿಕ ನಾವು ನಮ್ಮ ಅಭಿಪ್ರಾಯ ಹೇಳಿದ್ದೇವೆ” ಎಂದು ತಿರುಗೇಟು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next