Advertisement

Karnataka: ಶಿಕ್ಷಕರಿಗೆ ಸಹಪಠ್ಯ ಸ್ಪರ್ಧೆ ವೇಳಾಪಟ್ಟಿ ಪ್ರಕಟ

08:33 PM Oct 20, 2024 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯ ಸ್ಪರ್ಧೆ ನಡೆಯಲಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

Advertisement

ತಾಲೂಕು ಮಟ್ಟದ ಸ್ಪರ್ಧೆಗಳು ಅ. 25ರಂದು ನಡೆಯಲಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆ ನ. 6 ಮತ್ತು ರಾಜ್ಯಮಟ್ಟದ ಸ್ಪರ್ಧೆ ನ. 21 ಮತ್ತು 22ರಂದು ನಡೆಯಲಿದೆ.

ಭಾವಗೀತೆ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೊಪಕರಣಗಳ ತಯಾರಿಕೆ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ರಸಪ್ರಶ್ನೆ (ಸಾಮಾನ್ಯ ಜ್ಞಾನ), ರಸಪ್ರಶ್ನೆ (ವಿಜ್ಞಾನ) ಸ್ಪರ್ಧೆಗಳು ನಡೆಯಲಿವೆ. ಒಬ್ಬ ಶಿಕ್ಷಕ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಬಹುದು ಮತ್ತು ಪ್ರಥಮ ಸ್ಥಾನ ಪಡೆದ ಶಿಕ್ಷಕ ಮಾತ್ರ ಮುಂದಿನ ಹಂತಕ್ಕೆ ಅರ್ಹತೆ ಪಡೆಯುಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next