Advertisement

ಅಕ್ರಮ ವಲಸಿಗರ ಪತ್ತೆಗೆ ನಾಗರಿಕರ ಸಹಕಾರ ಅಗತ್ಯ

12:57 PM Aug 16, 2018 | |

ಮಹದೇವಪುರ: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತು ಆಫ್ರಿಕಾರನ್ನು ಪತ್ತೆಹಚ್ಚಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

Advertisement

72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹದೇವಪುರದ ಕಾಡುಗುಡಿ ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣದ ಬಳಿಕ ಮಾತನಾಡಿ, ಸಿಲಿಕಾನ್‌ ಸಿಟಿಯಲ್ಲಿ ಅನ್ಯ ರಾಜ್ಯಗಳ ಹೆಸರಿನಲ್ಲಿ ಬಾಂಗ್ಲ ಮತ್ತು ಆಫ್ರಿಕಾ ದೇಶಿಗರು ಅಕ್ರಮವಾಗಿ ನೆಲೆಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದು ರಾಜ್ಯ ಜನತೆಗೂ ತೊಂದರೆ, ರಾಜ್ಯಕ್ಕೂ ಅಪಖ್ಯಾತಿ ಎಂದರು.

ವಿಸಾ ಮುಗಿದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿರುವ ವಿದೇಶಿಗರನ್ನು ವಾಪಸ್‌ ಕಳುಹಿಸಲು  ಬೆಂಗಳೂರಿನಲ್ಲಿ ಗಡಿಪಾರು ಕೇಂದ್ರ ಸ್ಥಾಪನೆ ಮಾಡಲು ಕೇಂದ್ರ ಗƒಹಸಚಿವ ರಾಜನಾಥ್‌ಸಿಂಗ್‌ ರವರಿಗೆ ಮನವಿ ಮಾಡಲಾಗಿದೆ. ಗಡಿಪಾರು ಕೇಂದ್ರ ಸ್ಥಾಪನೆ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈ ವೇಳೆ ಅರಣ್ಯ ಇಲಾಖೆ ವತಿಯಿಂದ ಸಸಿಗಳನ್ನು ವಿತರಣೆ ಮಾಡಲಾಯಿತು. ಹಸಿರು ಕರ್ನಾಟಕ ನಿರ್ಮಾಣ ಮಾಡುವುದಾಗಿ ನೆರೆದಿದ್ದ ಶಾಲಾ ಮಕ್ಕಳು ಗಣ್ಯರು ಪ್ರತಿಜ್ಞೆ ಮಾಡಿದರು. ನಗರದ 15 ಕ್ಕೂ ಹೆಚ್ಚು ಶಾಲೆಗಳ ಮಕ್ಕಳು ಕಾಡುಗೋಡಿಯ ಪ್ರಮುಖ ರಸ್ತೆಗಳಲ್ಲಿ ಪಧ ಸಂಚಲನ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. 

ಪಾಲಿಕೆ ಸದಸ್ಯ ಎಸ್‌. ಮುನಿಸ್ವಾಮಿ, ಮಾಜಿ ನಗರಸಬೆ ಸದಸ್ಯ ಆಶ್ವಥ್‌ನಾರಾಯಣ ರೆಡ್ಡಿ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬ್ಬಡಿ ಪಿಳ್ಳಪ್ಪ, ಯುವಮೋರ್ಚ ಅಧ್ಯಕ್ಷ ರಾಜೇಶ್‌, ಮುಖಂಡರಾದ ವೀರಸ್ವಾಮಿರೆಡ್ಡಿ ಮತ್ತಿತರರು ಹಾಜರಿದ್ದರು.

Advertisement

ಗಡೀಪಾರು ಕೇಂದ್ರ ಆರಂಭಿಸಲು ಕೇಂದ್ರಕ್ಕೆ ಮನವಿ: ನಗರದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ವಿದೇಶಿ ಪ್ರಜೆಗಳನ್ನು ಗಡೀಪಾರು ಮಾಡುವ ಸಂಬಂಧ ಬೆಂಗಳೂರಿನಲ್ಲಿ ಗಡೀಪಾರು ಕೇಂದ್ರ ಆರಂಭಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಅರವಿಂದ ಲಿಂಬಾವಳಿ ಮತ್ತು ಸಂಸದ ಪಿ.ಸಿ.ಮೋಹನ್‌ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಭಾನುವಾರ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಮತ್ತು ಗೃಹ ಖಾತೆ ರಾಜ್ಯ ಸಚಿವ ಕಿರಣ್‌ ರಿಜುಜು ಅವರನ್ನು ಭೇಟಿ ಮಾಡಿದ ಅರಂವಿಂದ ಲಿಂಬಾವಳಿ ಮತ್ತು ಪಿ.ಸಿ.ಮೋಹನ್‌, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಕ್ರಮ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್‌ ಕಳುಹಿಸಲು ಗಡೀಪಾರು ಕೇಂದ್ರ ಸ್ಥಾಪಿಸುವ ಸಂಬಂಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ವಿದೇಶಾಂಗ ಕಾಯ್ದೆಯನ್ವಯ ಈ ರೀತಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪತ್ತೆಹಚ್ಚಿ ಅವರನ್ನು ಗಡೀಪಾರು ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next