Advertisement

Coach;ಕುತೂಹಲ ಮೂಡಿಸಿದ ಗೌತಮ್‌ ಗಂಭೀರ್‌-ಜಯ್‌ ಶಾ ಭೇಟಿ

11:15 PM May 27, 2024 | Team Udayavani |

ಚೆನ್ನೈ: ಕೆಕೆಆರ್‌ ಐಪಿಎಲ್‌ ಚಾಂಪಿಯನ್‌ ಆದ ಬೆನ್ನಲ್ಲೇ ತಂಡದ ಮೆಂಟರ್‌ ಗೌತಮ್‌ ಗಂಭೀರ್‌, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಟೀಮ್‌ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗೆ ಗಂಭೀರ್‌ ಪ್ರಮುಖ ಆಕಾಂಕ್ಷಿ ಎನ್ನಲಾಗುತ್ತಿರುವುದರಿಂದ ಇವರಿಬ್ಬರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

Advertisement

ಫೈನಲ್‌ ಪಂದ್ಯ ಮುಗಿಯುತ್ತಲೇ, ಗಂಭೀರ್‌ ಬಹಳ ಜೋಶ್‌ನಲ್ಲಿದ್ದ ವೀಡಿಯೋಗಳು ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಇದರ ಜತೆಯಲ್ಲೇ, ಗಂಭೀರ್‌ ಅವರನ್ನು ಜಯ್‌ ಶಾ ಭೇಟಿ ಮಾಡಿದ್ದಾರೆ. ಈ ವೇಳೆ ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಯ್ಕೆ ಕುರಿತು ಇಬ್ಬರ ಮಧ್ಯೆ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸದ್ಯ ಕ್ರಿಕೆಟ್‌ ತಂಡಕ್ಕೆ ಹೆಡ್‌ ಕೋಚ್‌ ಆಗಿರುವ ರಾಹುಲ್‌ ದ್ರಾವಿಡ್‌ ಅವರ ಜವಾಬ್ದಾರಿ ಟಿ20 ವಿಶ್ವಕಪ್‌ ಬಳಿಕ ಕೊನೆಗೊಳ್ಳಲಿದೆ. ಹೀಗಾಗಿ, ದ್ರಾವಿಡ್‌ ಜಾಗಕ್ಕೆ ಬಿಸಿಸಿಐ ಹೊಸ ಅರ್ಜಿಗಳನ್ನು ಕರೆದಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೇ ದಿನವಾಗಿದ್ದು, ಯಾರ್ಯಾರು ಅರ್ಜಿ ಸಲ್ಲಿಸಿದ್ದಾರೆ ಎಂಬ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಕೋಚ್‌ ಹುದ್ದೆಗೆ ಕೇಳಿಬಂದ ಮತ್ತೂಂದು ಹೆಸರೆಂದರೆ ವಿ.ವಿ.ಎಸ್‌. ಲಕ್ಷ್ಮಣ್‌ ಅವರದು. ಆದರೆ ಅವರು ಈ ಬಗ್ಗೆ ಆಸಕ್ತಿ ತೋರಿದಂತಿಲ್ಲ. ಇತ್ತ ದ್ರಾವಿಡ್‌ ಕೂಡ ಮರು ಅರ್ಜಿಯ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಸದ್ಯ ಸಂಭಾವ್ಯರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವವರೆಂದರೆ ಗಂಭೀರ್‌ ಒಬ್ಬರೇ.

Advertisement

Udayavani is now on Telegram. Click here to join our channel and stay updated with the latest news.

Next