Advertisement

Mysore; ಮಗನಿಗಾಗಿ ಮೈಸೂರಿಗೆ ಬಂದ ಕೋಚ್ ರಾಹುಲ್ ದ್ರಾವಿಡ್

05:40 PM Dec 01, 2023 | Team Udayavani |

ಮೈಸೂರು: ಏಕದಿನ ವಿಶ್ವಕಪ್ ಬಳಿಕ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಮೈಸೂರಿನಲ್ಲಿ ಕಾಣಿಸಿಕೊಂಡರು. ತನ್ನ ಮಗನಿಗಾಗಿ ರಾಹುಲ್ ದ್ರಾವಿಡ್ ಅವರು ಪತ್ನಿಯ ಜೊತೆಗೆ ಮೈಸೂರಿಗೆ ಆಗಮಿಸಿದ್ದಾರೆ.

Advertisement

ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ ಸಿಎ) ಮೈಸೂರು ವಲಯ ಆಯೋಜಿಸಿದ್ದ 19 ವರ್ಷದೊಳಗಿನವರ ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯು ಮೈಸೂರಿನ ಮಾನಸ ಗಂಗೋತ್ರಿಯ ಎಸ್ ಡಿಎನ್ ಆರ್ (ಶ್ರೀಕಂಠದತ್ತ ನರಸಿಂಹರಾಜ) ಒಡೆಯರ್ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ.

ಆತಿಥೇಯ ಕರ್ನಾಟಕ ತಂಡವು ಉತ್ತರಾಖಂಡ್ ವಿರುದ್ಧ ಚತುರ್ದಿನ ಪಂದ್ಯ ಆಡುತ್ತಿದೆ. ಈ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಆಲ್ ರೌಂಡರ್ ಆಗಿರುವ ಸಮಿತ್ ಆಟವನ್ನು ನೋಡಲು ರಾಹುಲ್ ದ್ರಾವಿಡ್ ಮತ್ತು ಪತ್ನಿ ಡಾ.ವಿಜೇತ ಅವರೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ. ಕ್ರೀಡಾಂಗಣದಲ್ಲಿ ನೆಲದ ಮೇಲೆ ಕುಳಿತು ರಾಹುಲ್ ಮಗನ ಆಟವನ್ನು ಗಮನಿಸಿದರು. ರಾಹುಲ್ ದ್ರಾವಿಡ್ ಅವರನ್ನು ಪತ್ರಕರ್ತರು ಭೇಟಿಯಾದಾಗ ಅವರು ಯಾವುದೇ ಸಂದರ್ಶನ ನೀಡಲು ನಿರಾಕರಿಸಿದರು. ಇತರ ಮಕ್ಕಳ ಪೋಷಕರಂತೆ ನಾನು ಬಂದಿದ್ದೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next