Advertisement

ಕಲ್ಲಿದ್ದಲು ಹಗರಣ: ಪಶ್ಚಿಮಬಂಗಾಳದ 7 ಐಪಿಎಸ್ ಅಧಿಕಾರಿಗಳಿಗೆ ಇ.ಡಿ ಸಮನ್ಸ್ ಜಾರಿ

05:54 PM Jul 08, 2021 | Team Udayavani |

ನವದೆಹಲಿ:ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ವರ್ಚುವಲ್ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಪಶ್ಚಿಮಬಂಗಾಳದ ಏಳು ಮಂದಿ ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಕಾನೂನು ವಿವಿ ಸೆಮಿಸ್ಟರ್‌ ಉತ್ತೀರ್ಣ ಮಾನದಂಡಕ್ಕೆ ವಿದ್ಯಾರ್ಥಿಗಳ ಆಕ್ಷೇಪ

ಕಲ್ಲಿದ್ದಲು ಮತ್ತು ಗೋ ಕಳ್ಳಸಾಗಣೆ ಪ್ರಕರಣವನ್ನು ಈಗಾಗಲೇ ಸಿಬಿಐ ಕೆಲವು ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿದ್ದು, ಇದೀಗ ಜಾರಿ ನಿರ್ದೇಶನಾಲಯ ಎಡಿಜಿ, ಡಿಐಜಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಸಮನ್ಸ್ ನೀಡಿರುವುದಾಗಿ ಹೇಳಿದೆ.

ಈ ಏಳು ಮಂದಿ ಪೊಲೀಸ್ ಅಧಿಕಾರಿಗಳಲ್ಲಿ ಇದೇ ಮೊದಲ ಬಾರಿಗೆ ಅಸಾನ್ಸೋಲ್ ದುರ್ಗಾಪುರ್ ಪೊಲೀಸ್ ಕಮಿಷನರ್ ಸುಕೇಶ್ ಜೈನ್ ಗೆ ಸಮನ್ಸ್ ಜಾರಿಗೊಂಡಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಸಮನ್ಸ್ ನೀಡಲಾಗಿದ್ದು, ವರ್ಚುವಲ್ ತನಿಖೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next