Advertisement

ಸಮ್ಮಿಶ್ರ ಸರ್ಕಾರ ಸುಭದ್ರ; ಎಚ್‌ಡಿಕೆಯೇ ಮುಂದುವರಿಯುತ್ತಾರೆ

10:01 AM May 25, 2019 | Vishnu Das |

ಬೆಂಗಳೂರು: ರಾಜ್ಯದಲ್ಲಿ ಇನ್ನು 4 ವರ್ಷಗಳ ಕಾಲ ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಹೇಳಿಕೆ ನೀಡಿದ್ದಾರೆ.

Advertisement

ಲೋಕಸಭಾ ಚನಾವಣಾ ಫ‌ಲಿತಾಂಶ ಪ್ರಕಟವಾದ ಬಳಿಕ ಶುಕ್ರವಾರ ಸಮನ್ವಯ ಸಮಿತಿಯ ಮಹತ್ವದ ಸಭೆ,ಅನೌಪಚಾರಿಕ ಸಂಪುಟ ಸಭೆಯ ಬಳಿಕ ಕಾಂಗ್ರೆಸ್‌-ಜೆಡಿಎಸ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪರಮೇಶ್ವರ್‌ ಅವರು ಹೇಳಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಜನರು ನೀಡಿರುವ ತೀರ್ಪು ಕೇಂದ್ರ ಸರ್ಕಾರದ ಕುರಿತಾಗಿ , ಆ ತೀರ್ಪು ರಾಜ್ಯ ಸರ್ಕಾರಕ್ಕೆ ಅನ್ವಯಿಸುವುದಿಲ್ಲ, ಫ‌ಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ವಿರೋಧ ಪಕ್ಷದವರ ಹೇಳಿಕೆಗಳಿಗೆ ಸ್ಪಂದಿಸದೆ ಸರ್ಕಾರ ಮುಂದುವರಿಸುತ್ತೇವೆ. ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ. ನಾವು ಮುಖ್ಯಮಂತ್ರಿಗೆ ವಿಶ್ವಾಸವನ್ನು ವ್ಯಕ್ತ ಪಡಿಸಿ ತೀರ್ಮಾನ ಕೈಗೊಂಡಿದ್ದೇವೆ.

ಸಮನ್ವಯ ಸಮಿತಿ ಯ ಅಧ್ಯಕ್ಷ ಸಿದ್ದರಾಮಯ್ಯ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ವಿಪಕ್ಷ ನಡೆಸುತ್ತಿರುವ ಷಡ್ಯಂತ್ರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ ಎಂದರು.

Advertisement

ಸರ್ಕಾರ 4 ವರ್ಷ ಮುಂದುವರಿಯುತ್ತದೆ ರಾಜ್ಯದ ಜನರಿಗೆ ನಿರಾಶೆಯನ್ನು ಮಾಡುವುದಿಲ್ಲ ಎಂದು ಒತ್ತಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡಲಿಲ್ಲ. ಪರಮೇಶ್ವರ್‌ ಅವರು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮುಂದಾಗಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next