Advertisement

ಕರಾವಳಿ: ಬೆಂಬಲ ಬೆಲೆಯಡಿ ಭತ್ತ ಖರೀದಿ ಆರಂಭ

12:39 AM Nov 16, 2021 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಋತುವಿನ ಬೆಂಬಲ ಬೆಲೆಯಡಿ ಭತ್ತ ಖರೀದಿ ಪ್ರಕ್ರಿಯೆ ನ. 15ರಿಂದ ಆರಂಭಗೊಂಡಿದೆ.

Advertisement

“ಫ್ರೂಟ್ಸ್‌’ ತಂತ್ರಾಂಶದ ಮೂಲಕ ರೈತರ ಮಾಹಿತಿಯನ್ನು ನೇರವಾಗಿ ಪಡೆಯಲಾಗುತ್ತದೆ. ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಲೆ ಆಧರಿಸಿ ಮತ್ತು ಕೇಂದ್ರದ ಮಾರ್ಗಸೂಚಿಗಳ ಅನ್ವಯ ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ಭತ್ತವನ್ನು ನೀಡುವ ರೈತರು ನೋಂದಣಿ ಮಾಡಬಹುದು.

ನೋಂದಣಿ ಮಾಡಿದ ರೈತರಿಂದ ಭತ್ತವನ್ನು ಸರಕಾರ ನಿಗದಿಪಡಿಸುವ ಗಿರಣಿಗಳ ಮೂಲಕ ನೇರವಾಗಿ ಖರೀದಿಸಲಾಗುತ್ತದೆ. ಕೇಂದ್ರ ಸರಕಾರವು ಪ್ರತೀ ಕ್ವಿಂಟಾಲ್‌ ಸಾಮಾನ್ಯ ಭತ್ತಕ್ಕೆ 1,940 ರೂ. ಮತ್ತು ಪ್ರತೀ ಕ್ವಿಂಟಾಲ್‌ ಎ ಗ್ರೇಡ್‌ ಭತ್ತಕ್ಕೆ 1,960 ರೂ. ನಿಗದಿಪಡಿಸಿದೆ. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ರೈತರಿಂದ ಭತ್ತ ಖರೀದಿಸುವ ಸಂಗ್ರಹಣ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

ಇದನ್ನೂ ಓದಿ:ಆದಿವಾಸಿಗಳ ನಿರ್ಲಕ್ಷಿಸಿದ್ದ ಕಾಂಗ್ರೆಸ್‌: ಪ್ರಧಾನಿ ಮೋದಿ ಆರೋಪ

ನೋಂದಣಿ ಕೇಂದ್ರಗಳು
-ದಕ್ಷಿಣ ಕನ್ನಡ ಜಿಲ್ಲೆ
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮಂಗಳೂರಿನ ಶಕ್ತಿನಗರ, ಮೂಡುಬಿದಿರೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ಶಾಖೆಗಳು

Advertisement

-ಉಡುಪಿ ಜಿಲ್ಲೆ
ಉಡುಪಿ, ಕುಂದಾಪುರ, ಕಾರ್ಕಳ ಎಪಿಎಂಸಿ

Advertisement

Udayavani is now on Telegram. Click here to join our channel and stay updated with the latest news.

Next