Advertisement

ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಆತಂಕ ಸೃಷ್ಟಿಸಿದ ನಾಗರಹಾವು!

09:39 AM Jul 09, 2021 | Team Udayavani |

ದಾವಣಗೆರೆ: ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Advertisement

ಬಯೋ ಮೆಡಿಕಲ್ ತ್ಯಾಜ್ಯ ಸಂಗ್ರಹಗಾರದ ಬಳಿ ಹಾವು ಕಾಣಿಸಿಕೊಂಡಿದೆ. ಸಿಬ್ಬಂದಿ ತ್ಯಾಜ್ಯ ವಿಲೇವಾರಿಗೆ ತೆರಳಿದ ಸಮಯದಲ್ಲಿ ಹಾವು ಕಂಡು ಇತರರಿಗೆ ವಿಷಯ ತಿಳಿಸಿದ್ದಾರೆ.

ಹಾವು ಹಿಡಿಯುವ ಯಲ್ಲಪ್ಪ ಮತ್ತವರ ಗೆಳೆಯರು ಚಾಣಾಕ್ಷತನದಿಂದ ಹಾವನ್ನು ಸೆರೆ ಹಿಡಿದು ಕೊಂಡಜ್ಜಿ ಅರಣ್ಯ ಪ್ರದೇಶಕ್ಕೆ ಸಾಗಿಸಿದರು.

ಇದನ್ನೂ ಓದಿ:ಪ್ರಾಯಶಃ ಎಂಬ ಕಿಲ್ಲಿಂಗ್ ಸ್ಟೋರಿ: ಕೃಷ್ಣಾ ಭಟ್, ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ

ಒಂದು ವಾರದ ಅಂತರದಲ್ಲಿ  ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಎರಡನೇ ಬಾರಿಗೆ ಹಾವು ಕಾಣಿಸಿಕೊಂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next