Advertisement

ನೀತಿ ಸಂಹಿತೆ: MLC ಪ್ರದೀಪ್ ಶೆಟ್ಟರ, ಶಾಸಕ ರಾಮಣ್ಣ ಲಮಾಣಿ ಸೇರಿ 6 ಜನರ ವಿರುದ್ಧ ಪ್ರಕರಣ

12:42 PM Apr 08, 2023 | Team Udayavani |

ಗದಗ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪಡಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ, ಶಾಸಕ ರಾಮಣ್ಣ ಲಮಾಣಿ ಸೇರಿ ಶಿರಹಟ್ಟಿ ಮತಕ್ಷೇತ್ರದ ಆರು ಜನ ಬಿಜೆಪಿ ಆಕಾಂಕ್ಷಿತರ ಮೇಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿಗಳಾದ ಶಾಸಕ ರಾಮಣ್ಣ ಲಮಾಣಿ, ಡಾ. ಚಂದ್ರು ಲಮಾಣಿ, ಭೀಮಸಿಂಗ್ ರಾಠೋಡ, ಗುರುನಾಥ್ ದಾನಪ್ಪನವರ್ ಹಾಗೂ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಲಕ್ಷ್ಮೆಶ್ವರ ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದಲ್ಲಿ ಪ್ರದೀಪ ಶೆಟ್ಟರ ನೇತೃತ್ವದಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಐವರು ಆಕಾಂಕ್ಷಿಗಳು ಬಿಜೆಪಿ ಪಕ್ಷದ ಪರವಾಗಿ ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಎಂದು ಆಣೆ ಪ್ರಮಾಣ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ನೀಡಿದ ದೂರಿನ ಮೇಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಸ್ಥಳಗಳ ದುರುಪಯೋಗ 1988 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next