Advertisement

ಗುಡಿಬಂಡೆ: ನೀತಿ ಸಂಹಿತೆ ಜಾರಿಯಲ್ಲಿದ್ದರೂ ತೆರವುಗೊಳ್ಳದ ಭಿತ್ತಿ ಚಿತ್ರಗಳು

02:52 PM May 04, 2023 | Team Udayavani |

ಗುಡಿಬಂಡೆ: ಪಟ್ಟಣದ ಮೂರನೇ ವಾರ್ಡ್‌ನಲ್ಲಿ ಪ್ರತಿ ಕಂಬಗಳಿಗೂ ಬಿಜೆಪಿ ಪಕ್ಷದ ಭಿತ್ತಿ ಚಿತ್ರಗಳು ರಾಜಾಜಿಸುತ್ತಿದ್ದರೂ ಪಟ್ಟಣ ಪಂಚಾಯತ್ ಅಧಿಕಾರಿಗಳು‌ ಅದನ್ನು ತೆರವುಗೊಳಿಸದೇ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರಸ್ ಮುಖಂಡರು ಆರೋಪಿಸಿದ್ದಾರೆ.

Advertisement

ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗದಂತೆ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ಭಿತ್ತಿ ಪತ್ರಗಳು, ಗೋಡೆ ಬರಹಗಳು, ಹಾಗೂ ಪಕ್ಷಗಳಿಗೆ ಸಂಬಂಧಿಸಿದ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಆದೇಶಿಸಿ 40 ದಿನಗಳು ಕಳೆದರೂ ಗುಡಿಬಂಡೆ ಪಟ್ಟಣದ ಮೂರನೇ ವಾರ್ಡ್‌ನಲ್ಲಿ ಬಿಜೆಪಿ ಪಕ್ಷಕ್ಕೆ ಸಂಬಂಧಿಸಿದಂತೆ ಭಿತ್ತಿಪತ್ರಗಳನ್ನು ತೆರವುಗೊಳಿಸದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಕೂಡಲೇ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳು ಪ. ಪಂ. ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಭಿತ್ತಿ ಪತ್ರಗಳನ್ನು ತೆರವುಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next