Advertisement

ಮರುಪಾವತಿಯಾಗದ 22 ಕೋಟಿ ಸಾಲ…200 ಎಕರೆ ಕಾಫಿ ಎಸ್ಟೇಟ್ ಮುಟ್ಟುಗೋಲು

09:10 PM Feb 11, 2021 | Team Udayavani |

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆಯ ರಮೇಶ್ ರಾವ್ ಎಂಬುವರಿಗೆ ಸೇರಿದ 200 ಎಕರೆ ವಾಟೇಖಾನ್ ಕಾಫಿ ಎಸ್ಟೇಟ್ ಅನ್ನು ಚಿಕ್ಕಮಗಳೂರಿನ ಯೂನಿಯನ್ ಬ್ಯಾಂಕ್ ನಿಂದ ಮುಟ್ಟುಗೋಲು ಹಾಕಲಾಗಿದೆ.

Advertisement

22 ಕೋಟಿ ರೂ.ಸಾಲ ಮರುಪಾವತಿ ಮಾಡದ ಹಿನ್ನೆಲೆ ಬ್ಯಾಂಕ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ನೆರವಿನೊಂದಿಗೆ ಕಾಫಿ ಎಸ್ಟೇಟ್ ಸೀಜ್ ಮಾಡಿದ್ದಾರೆ.

ಇದನ್ನೂ ಓದಿ :ಪ್ಯಾನ್ ಇಂಡಿಯಾ ಸಿನಿಮಾ ‘ಲೈಗರ್’ ಬಿಡುಗಡೆ ದಿನಾಂಕ ಪ್ರಕಟ

ಕಾಫಿ ಎಸ್ಟೇಟ್ ಮಾಲೀಕ ತೋಟದಲ್ಲಿ ಕೆಲಸ ಮಾಡುವ 50 ಕ್ಕೂ ಹೆಚ್ಚು ಕಾರ್ಮಿಕರಿಗೂ ಲಕ್ಷಾಂತರ ರೂಪಾಯಿ ಬಾಕಿ ಹಣ ಪಾವತಿಸಬೇಕಿದ್ದು, ನಮ್ಮನ್ನು ಇಲ್ಲಿಂದ ಹೊರಗೆ ಕಳುಹಿಸಬೇಡಿ ಎಂದು ಕಾರ್ಮಿಕರು ಅಧಿಕಾರಿಗಳ ಮುಂದೆ ಅಂಗಲಾಚುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next