Advertisement

ಇಂದು ಕೇಂದ್ರ ವಾಣಿಜ್ಯ ಸಚಿವರ ಜೊತೆ ಕಾಫಿ ಬೆಳೆಗಾರರ ಚರ್ಚೆ

11:06 PM Jul 22, 2019 | Team Udayavani |

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಕೇಂದ್ರ ವಾಣಿಜ್ಯ ಸಚಿವಾಲಯ ಕರ್ನಾಟಕ ಬೆಳೆಗಾರರ ಒಕ್ಕೂಟವನ್ನು ದೆಹಲಿಗೆ ಆಹ್ವಾನಿಸಿದೆ. ಕಳೆದ ಜೂನ್‌ನಲ್ಲಿ ದೆಹಲಿಗೆ ತೆರಳಿದ್ದ ಕರ್ನಾಟಕ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು, ಕೇಂದ್ರ ವಾಣಿಜ್ಯ ಸಚಿವರು, ವಿತ್ತ ಸಚಿವರು ಮತ್ತು ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ, ಬೆಳೆ ಕುಂಠಿತ, ಗಿಡಗಳಿಗೆ ರೋಗ ಬಾಧೆ, ಕಾರ್ಮಿಕರ ಕೊರತೆ ಸೇರಿದಂತೆ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದರು.

Advertisement

ಅಲ್ಲದೇ, ಕಾಫಿ ಉದ್ಯಮದ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರು ಒಕ್ಕೂಟದ ಕೆಜಿಎಫ್‌ ಘಟಕದ ಅಧ್ಯಕ್ಷ ಯು.ಎಂ.ತೀರ್ಥ ಮಲ್ಲೇಶ್‌ ಅವರಿಗೆ ಕರೆ ಮಾಡಿ, ಜು.23ರಂದು ಸಂಜೆ 4ಗಂಟೆಗೆ ದೆಹಲಿಯ ಪಾರ್ಲಿಮೆಂಟ್‌ ಭವನದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ ಎಂದು ಒಕ್ಕೂಟದ ಉಪಾಧ್ಯಕ್ಷ ಡಿ.ಎಂ.ವಿಜಯ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next