Advertisement

ರಾಮದಾಸ್, ಸಿಂಹ ಕೋಲ್ಡ್ ವಾರ್ : ಮೈಸೂರು ಬಿಜೆಪಿಯಲ್ಲಿ ಭುಗಿಲೆದ್ದ ಅಸಮಧಾನ

04:55 PM Jan 27, 2022 | Team Udayavani |

ಮೈಸೂರು : ಸಂಸದ ಪ್ರತಾಪ್‌ಸಿಂಹ ಮತ್ತು ಶಾಸಕ‌ ಎಸ್.ಎ.ರಾಮದಾಸ್ ನಡುವೆ ಶೀತಲ ಸಮಾರ ಮುಂದುವರೆದಿದೆ. ಮನೆಮನೆಗೆ ಗ್ಯಾಸ್ ಸಂಪರ್ಕ ಯೋಜನೆಗೆ ಅನುಮತಿ ನೀಡದಂತೆ ಶಾಸಕ ರಾಮದಾಸ್ ಪತ್ರ ಬರೆದಿರುವುದಕ್ಕೆ ಪ್ರತಾಪ ಸಿಂಹ ಕೆಂಡಾಮಂಡಲರಾಗಿದ್ದಾರೆ.

Advertisement

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ರಾಮದಾಸ್ ಮೋದಿಗಿಂತ ಸೀನಿಯರ್.ಅವರಿಗಿಂತ ಬುದ್ದಿವಂತರು ಜ್ಞಾನಿಗಳು.ಕೇವಲ ಬ್ಯಾನರ್ ಅಲ್ಲಿ ಮೋದಿ ಪೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗುವುದಿಲ್ಲ.ಮೋದಿ ಯೋಜನೆಗಳನ್ನು ವಿರೋಧಿಸಿದರೆ ಜನ ಪಾಠ ಕಲಿಸುತ್ತಾರೆ ಎಂದರು.

ಯೋಜನೆಯನ್ನು ಕಾಂಗ್ರೆಸ್ ಜೆಡಿಎಸ್ ಶಾಸಕರು ವಿರೋಧಿಸಿಲ್ಲ. ನಮ್ಮದೇ ಪಕ್ಷದ ಶಾಸಕರು ವಿರೋಧಿಸಿದ್ದಾರೆ. ಅವರನ್ನು ತಾಯಿ ಚಾಮುಂಡೇಶ್ವರಿ, ಮೈಸೂರಿನ ಜನ ನೋಡಿಕೊಳ್ಳುತ್ತಾರೆ. ಈ ರೀತಿ ಚಿಲ್ಲರೆ ರಾಜಕಾರಣ ಮಾಡಬೇಡಿ. ಇದ್ಯಾವುದಕ್ಕೂ ನಾನು ಕೇರ್ ಮಾಡುವುದಿಲ್ಲ ಎಂದಿದ್ದಾರೆ.

ಕೆ.ಆರ್.ಕ್ಷೇತ್ರದ ಕಸವನ್ನ ಎತ್ತಿಸೋದು ನಾನೆ.ಈ ಯೋಜನೆಯನ್ನೂ ನಾನೆ ಪೂರ್ಣ ಮಾಡುತ್ತೇನೆ. ಯಾವುದಕ್ಕೂ ನಾನು‌ ಕೇರ್ ಮಾಡುವುದಿಲ್ಲ‌. ಎಂದು ಶಾಸಕ ರಾಮದಾಸ್‌ ಅವರಿಗೆ ಪ್ರತಾಪ್‌ಸಿಂಹ ತಿರುಗೇಟು ನೀಡಿದ್ದಾರೆ.

ವಿಧಾನಸೌಧದ ವಾಸ್ತು ಸರಿ‌ ಇಲ್ಲ!

Advertisement

ಸ್ಥಳೀಯರಿಗೆ ಸಚಿವ ಸ್ಥಾನ ನೀಡಲು ದನಿಗೂಡಿಸದ ಆರೋಪ‌ಕ್ಕೆ ಪ್ರತಿಕ್ರಿಯಿಸಿದ ಸಂಸದ ಸಿಂಹ, ನಾನು ಈಗಾಗಲೇ‌ ಹೇಳಿರುವಂತೆ ವಿಧಾನಸೌಧದ ವಾಸ್ತು ಸರಿ‌ ಇಲ್ಲ.ಗೆದ್ದ 224 ಮಂದಿ ಶಾಸಕರೆಲ್ಲಾ ನಾನು ಮಂತ್ರಿ ಆಗ್ಬೇಕು ಅಂತ ಬಯಸ್ತಾರೆ. ಆದರೆ ಕೇಂದ್ರ, ರಾಜ್ಯ ನಾಯಕರು ತೀರ್ಮಾನ ಮಾಡಿ ಮಂತ್ರಿ ಮಾಡುತ್ತಾರೆ. ಸ್ಥಳೀಯರಿಗೆ ಸಚಿವ ಸ್ಥಾನ ನೀಡಬೇಕಾ‌ ಬೇಡವ ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next