Advertisement

ರಾಜ್ಯಾದ್ಯಂತ ಒಣ ಹವೆ ಜತೆಗೆ ಚಳಿ

08:17 PM Nov 17, 2022 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನ ಹಗಲಿನಲ್ಲಿ ಒಣಹವೆ ಹಾಗೂ ರಾತ್ರಿ ವೇಳೆ ಚಳಿಯ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿದ್ದ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ರಾಜ್ಯಾದ್ಯಂತ ನ.19ರ ವರೆಗೆ ಒಣಹವೆ ಮುಂದುವರಿಯಲಿದೆ. ಇದುವರೆಗೆ ಸುರಿದ ಮಳೆಯ ಪ್ರಭಾವದಿಂದ ಸಂಜೆ ವೇಳೆ ಚಳಿಯ ವಾತಾವರಣ ಇರಲಿದ್ದು, ಚಳಿ ಗಾಳಿಯೂ ಹೆಚ್ಚಾಗಲಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಚಳಿ ಹೆಚ್ಚಾಗಲಿದೆ. ಹಗಲಿನಲ್ಲಿ ಒಣ ಹವೆ ಇರಲಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವಣ ಇರಲಿದ್ದು, ಕೆಲ ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿವೆ.

ಗರಿಷ್ಠ 24 ಹಾಗೂ ಕನಿಷ್ಠ 17 ಡಿ.ಸೆ.ಉಷ್ಣಾಂಶ ಇರುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ನ.17ರಂದು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾದರೆ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next