Advertisement

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

12:54 PM Mar 30, 2023 | Team Udayavani |

ಗುರುಗ್ರಾಮ: ಕಚೇರಿಯಲ್ಲಿ ಕುರ್ಚಿ ವಿಚಾರವಾಗಿ ನಡೆದ ವಾದ ವಿವಾದದ ಹಿನ್ನೆಲೆಯಲ್ಲಿ ಹಣಕಾಸು ಸಂಸ್ಥೆಯೊಂದರ ಉದ್ಯೋಗಿಯೊಬ್ಬರಿಗೆ ಆತನ ಸಹೋದ್ಯೋಗಿಯೇ ಗುಂಡು ಹಾರಿಸಿರುವ ಘಟನೆ ಇಲ್ಲಿನ ರಾಮದಾ ಹೋಟೆಲ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸಂತ್ರಸ್ತ ಗಂಭೀರವಾಗಿ ಗಾಯಗೊಂಡಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬುಧವಾರ ತಿಳಿಸಿದ್ದು, ಹರ್ಯಾಣದ ಹಿಸಾರ್‌ ಮೂಲದ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದಾಳಿಗೊಳಗಾದ ವ್ಯಕ್ತಿಯನ್ನು ಗುರುಗ್ರಾಮ್‌ನ ಸೆಕ್ಟರ್ 9 ರ ಫಿರೋಜ್ ಗಾಂಧಿ ಕಾಲೋನಿ ನಿವಾಸಿ ವಿಶಾಲ್ (23) ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ವಿಶಾಲ್ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ವಿಶಾಲ್ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು, ಸಹೋದರನ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಕಚೇರಿಯಲ್ಲಿ ಕುರ್ಚಿ ವಿಚಾರವಾಗಿ ತನ್ನ ಸಹೋದ್ಯೋಗಿ ಅಮನ್ ಜಂಗ್ರಾ ಅವರೊಂದಿಗೆ ವಾಗ್ವಾದ ನಡೆಸಿರುವುದಾಗಿ ವಿಶಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬುಧವಾರ, ಅವರು ಅದೇ ವಿಷಯದ ಬಗ್ಗೆ ಮತ್ತೆ ವಾಗ್ವಾದ ನಡೆಸಿದರು ಮತ್ತು ನಂತರ ಅವರು ಕಚೇರಿಯಿಂದ ಹೊರನಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಮನ್ ಹಿಂದಿನಿಂದ ಬಂದು ಪಿಸ್ತೂಲ್ ತೆಗೆದುಕೊಂಡು ತನ್ನ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವಿಶಾಲ್ ಅವರು ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಲಾಗಿದೆ ಮತ್ತು ನಾವು ಅವನನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸಲಾಗುವುದು ಎಂದು ಪೂರ್ವ ವಿಭಾಗದ ಡಿಸಿಪಿ ವೀರೇಂದ್ರ ವಿಜ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next