Advertisement

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

11:06 AM Jun 30, 2024 | Team Udayavani |

ಬೆಂಗಳೂರು: ಖಾಸಗಿ ನರ್ಸಿಂಗ್‌ ಕಾಲೇಜೊಂದರ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಆರು ಹಳೇಯ ಬಸ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಹೆಗ್ಗನಹಳ್ಳಿ ಕ್ರಾಸ್‌ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

Advertisement

ಹೆಗ್ಗನಹಳ್ಳಿ ಕ್ರಾಸ್‌ನ ಕೆಟಿಜಿ ನರ್ಸಿಂಗ್‌ ಕಾಲೇಜು ಆವರಣದಲ್ಲಿ ಶನಿವಾರ ಮಧ್ಯಾಹ್ನ ಸುಮಾರು 2.30ಕ್ಕೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದ 7 ಕಾಲೇಜು ವಾಹನಗಳಿಗೆ ಹಾನಿಯಾಗಿದ್ದು, ಆರು ವಾಹನಗಳು ಭಾಗಶಃ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಕಾಲೇಜಿನ ಆಡಳಿತ ಮಂಡಳಿ 15 ವರ್ಷ ಸಂಚಾರ ಪೂರೈಸಿದ 7 ವಾಹನಗಳನ್ನು ಕಾಲೇಜಿನ ಆವರಣದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿತ್ತು. ಮಧ್ಯಾಹ್ನ ಒಂದು ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಪಕ್ಕದ ವಾಹನಗಳಿಗೂ ಬೆಂಕಿ ಆವರಿಸಿ ಹೊತ್ತಿ ಉರಿಯಲು ಆರಂಭಿಸಿವೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ 7 ಬಸ್‌ಗಳ ಪೈಕಿ 6 ವಾಹನಗಳಿಗೆ ಹಾನಿಯಾಗಿವೆ. ಹಳೇಯ ಕಾಲೇಜು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ವಾಹನಗಳು ಸಂಚಾರ ಸ್ಥಗಿತಗೊಳಿಸಿದ್ದರಿಂದ ಹಲವು ದಿನಗಳಿಂದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದರು. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next