Advertisement

ಮಡಿಕೇರಿ: ಕೆರೆಗೆ ಹಾರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ

12:09 AM Feb 18, 2023 | Team Udayavani |

ಮಡಿಕೇರಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Advertisement

ಮಡಿಕೇರಿ ಪುಟಾಣಿ ನಗರದ ನಿವಾಸಿ ಕುಮಾರೇಶ್ ಎಂಬುವವರ ಪುತ್ರಿ ಕೀರ್ತನ(17) ಆತ್ಮಹತ್ಯೆಗೆ ಶರಣಾದ ಬಾಲಕಿ.

ಮಡಿಕೇರಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಕೀರ್ತನ, ಶುಕ್ರವಾರ ಬೆಳಿಗ್ಗೆ ಬಸ್‌ನಲ್ಲಿ ಸೋಮವಾರಪೇಟೆಗೆ ಆಗಮಿಸಿ, ಗಾಂಧಿನಗರದಲ್ಲಿರುವ ತನ್ನ ಅಜ್ಜಿಯ ಮನೆಗೆ ತೆರಳುವ ಮಾರ್ಗ ಮಧ್ಯೆ ಚೌಡ್ಲು ಗ್ರಾಮದ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸೋಮವಾರಪೇಟೆ ಪೊಲೀಸರು ಶವವನ್ನು ಕೆರೆಯಿಂದ ತೆಗೆದು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಜಾಂಡಿಸ್‌ ಉಲ್ಬಣಗೊಂಡು ಯುವಕ ಸಾವು

Advertisement

Udayavani is now on Telegram. Click here to join our channel and stay updated with the latest news.

Next