Advertisement

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

04:26 PM Oct 01, 2024 | Team Udayavani |

ಕೋಟೇಶ್ವರ: ಕಾಲೇಜು ಮುಗಿಸಿ ತನ್ನ ಸ್ನೇಹಿತರ ಜೊತೆಗೆ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಮಂಗಳವಾರ(ಅ.1) ರಂದು ನಡೆದಿದೆ.

Advertisement

ಮೃತ ವಿದ್ಯಾರ್ಥಿಯನ್ನು ಧನುಷ್ ಎನ್ನಲಾಗಿದೆ.

ಧನುಷ್ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು ಇಂದು (ಮಂಗಳವಾರ) ಮಧ್ಯಾಹ್ನ ಕಾಲೇಜು ಮುಗಿಸಿ ತನ್ನ ಸ್ನೇಹಿತರ ಜೊತೆ ಫುಟ್ ಪಾಥ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಧನುಷ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

Advertisement
Advertisement

Udayavani is now on Telegram. Click here to join our channel and stay updated with the latest news.

Next