Advertisement

ಕರ್ನಾಟಕ ಹೈಕೋರ್ಟ್‌ಗೆ ನ್ಯಾ|ಓಕಾ ಸಿಜೆ

10:10 AM Apr 12, 2019 | Team Udayavani |

ಹೊಸದಿಲ್ಲಿ: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾ| ಎ.ಎಸ್‌. ಓಕಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸು ವಂತೆ ಸಿಜೆಐ ರಂಜನ್‌ ಗೊಗೊಯ್‌ ನೇತೃತ್ವದ ಕೊಲಿಜಿಯಂ ಕೇಂದ್ರ ಸರ ಕಾರಕ್ಕೆ ಶಿಫಾರಸು ಮಾಡಿದೆ. ದಿಲ್ಲಿ ಹೈಕೋರ್ಟ್‌ ಹಿರಿಯ ನ್ಯಾ| ಮೈಸೂರು ಮೂಲದ ನ್ಯಾ| ಎಸ್‌. ರವೀಂದ್ರ ಭಟ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯಾಗಿ ನೇಮಿಸುವಂತೆಯೂ ಅದು ಶಿಫಾರಸು ಮಾಡಿದೆ.

Advertisement

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾ| ದಿನೇಶ್‌ ಮಹೇಶ್ವರಿ ಅವರನ್ನು ಜನವರಿಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನ್ಯಾ| ಎ.ಎಸ್‌. ಓಕಾ ಅವರನ್ನು ನೇಮಿಸಲು ತೀರ್ಮಾನಿಸಲಾಗಿದೆ.

ಇತರ ಐವರು ನ್ಯಾಯಮೂರ್ತಿಗಳು
ನ್ಯಾ| ವಿಕ್ರಮ್‌ ನಾಥ್‌ ಅವರನ್ನು ಹೊಸದಾಗಿ ಸ್ಥಾಪನೆಗೊಂಡಿರುವ ಆಂಧ್ರಪ್ರದೇಶ ಹೈಕೋರ್ಟ್‌, ನ್ಯಾ| ಪಿ.ಆರ್‌. ರಾಮಚಂದ್ರ ಮೆನನ್‌ರನ್ನು ಛತ್ತೀಸ್‌ಗಢ ಹೈಕೋರ್ಟ್‌, ನ್ಯಾ| ಎ.ಕೆ. ಮಿತ್ತಲ್‌ರನ್ನು ಮೇಘಾಲಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂ ಶಿಫಾರಸು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next