Advertisement

ಆ್ಯಂಬುಲೆನ್ಸ್- ಸ್ಕೂಟಿ ಮುಖಾಮುಖಿ ಢಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

07:49 AM Jun 15, 2021 | Team Udayavani |

ಚಿತ್ರದುರ್ಗ: ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಆ್ಯಂಬುಲೆನ್ಸ್‌ ನಡುವೆ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಅಪಘಾತದಲ್ಲಿ ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆಯ ಸಜ್ಜನಕೆರೆ ಗ್ರಾಮದ ಕಾಂತರಾಜ (22 ವ), ಚಿತ್ರದುರ್ಗ ಕರುವಿನಕಟ್ಟೆ ಬಳಿಯ ಶ್ರೀಕಾಂತ (20 ವ), ನಂಜುಂಡ (20 ವ) ಎಂದು ಗುರುತಿಸಲಾಗಿದೆ. ಹೊಳಲ್ಕೆರೆಯಲ್ಲಿ ಪೇಂಟಿಂಗ್ ಕೆಲಸ ಮುಗಿಸಿಕೊಂಡು ವಾಪಾಸು ಬರುತ್ತಿದ್ದಾಗ ಅಂಬ್ಯುಲೆನ್ಸ್ ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಹೊಳಲ್ಕೆರೆ ಕಡೆಯಿಂದ ಚಿತ್ರದುರ್ಗದತ್ತ ಬರುತ್ತಿದ್ದರು. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆ್ಯಂಬುಲೆನ್ಸ್‌ ಸಾಗುತ್ತಿತ್ತು. ತಿರುಮಲ ಡಾಬಾ ಸಮೀಪ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ದೂರ ಬಿದ್ದಿದೆ. ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆಯ ಪೊಲೀಸರು ಮೃತರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಆ್ಯಂಬುಲೆನಲ್ಲಿ ಚಾಲಕ ಒಬ್ಬರೇ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next