Advertisement

ಬಸ್-ಲಾರಿ ನಡುವೆ ಭೀಕರ ಅಪಘಾತ: ಎಂಟು ಜನರ ದುರ್ಮರಣ; 27 ಮಂದಿಗೆ ಗಂಭೀರ ಗಾಯ

08:20 AM May 24, 2022 | Team Udayavani |

ಹುಬ್ಬಳ್ಳಿ:  ಹುಬ್ಬಳ್ಳಿ- ಧಾರವಾಡ ಬೈಪಾಸ್ ನ ರೇವಡಿಹಾಳ ಕ್ರಾಸ್ ಬಳಿ ಸೋಮವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಚಾಲಕರಿಬ್ಬರು ಸೇರಿ ಎಂಟು ಜನರು ಮೃತಪಟ್ಟು, 27 ಜನರು ಗಂಭೀರ ಗಾಯಗೊಂಡಿದ್ದಾರೆ.

Advertisement

ಬಸ್ ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರು ಕಡೆಗೆ ಹಾಗೂ ಲಾರಿ ಬೆಂಗಳೂರು ಕಡೆಯಿಂದ ಪುಣೆ ಕಡೆ ಹೊರಟಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ ಎರಡೂ ವಾಹನಗಳ ಚಾಲಕರು ಸೇರಿ ಆರು ಜನ ಮೃತಪಟ್ಟರೆ, ಇಬ್ಬರು ನಂತರ ಅಸುನೀಗಿದ್ದಾರೆ.

ಗಾಯಗೊಂಡ ಎಲ್ಲಾ 27 ಜನರು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ

ಅಪಘಾತ ಸಂಭವಿಸುತ್ತಿದ್ದಂತೆ ಮಹಾನಗರ ಪೊಲೀಸ್ ಆಯುಕ್ತ ಲಾಭೂ ರಾಮ ಹಾಗೂ ಉತ್ತರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕಿಮ್ಸ್ ಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next