Advertisement

ರಂಗೇನಹಳ್ಳಿ ಬಳಿ ಕಾರುಗಳ ಮುಖಾಮುಖಿ ಢಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

03:08 PM Jan 09, 2021 | Team Udayavani |

ಚಿಕ್ಕಮಗಳೂರು: ಎರಡು ಕಾರುಗಳು ನಡುವೆ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಶನಿವಾರ ನಡೆದಿದೆ.

Advertisement

ರಂಗೇನಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟ ವ್ಯಕ್ತಿಯನ್ನು ಕುಂದಾಪುರ ಮೂಲದ ನಾಗೇಂದ್ರ (28) ಎಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು, ಓವರ್ ಟೇಕ್ ಮಾಡಲು ಹೋಗಿ ಎದುರು ಗಡೆಯಿಂದ ಬಂದ ಇನ್ನೊಂದು ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ:ಕಾನತ್ತೂರು: ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

ಗಂಭೀರವಾಗಿ ಗಾಯಗೊಂಡ ಮೂವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Advertisement

ಲಕ್ಕವಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next