Advertisement

VIDEO ಅಪಘಾತದಲ್ಲಿ ಗಾಯಗೊಂಡಿದ್ದವರ ಮೇಲೆ ಬಂದು ಗುದ್ದಿದ ಯಮರೂಪಿ ಕಾರು: ಐವರು ಸಾವು

10:11 AM Oct 05, 2022 | Team Udayavani |

ಮುಂಬೈ: ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 12 ಮಂದಿ ಗಾಯಗೊಂಡ ಘಟನೆ ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ನಡೆದಿದೆ.

Advertisement

ಬುಧವಾರ ಮುಂಜಾನೆ 3:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಈ ಜಾಗದಲ್ಲಿ ಕೆಲ ನಿಮಿಷಗಳ ಮೊದಲು ಅಪಘಾತವೊಂದು ನಡೆದಿತ್ತು. ಅಲ್ಲಿ ಗಾಯಗೊಂಡವರನ್ನು ಕರೆದೊಯ್ಯಲು ಬಂದಿದ್ದ ಆಂಬುಲೆನ್ಸ್ ಮತ್ತು ಇತರ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಮತ್ತೊಂದು ಅಪಘಾತ ಸಂಭವಿಸಿದೆ.

ಇದನ್ನೂ ಓದಿ:ಕ್ಯಾಚ್ ಹಿಡಿದು ಬೌಂಡರಿ ಗೆರೆ ತುಳಿದ ಸಿರಾಜ್ ಗೆ ನಿಂದಿಸಿದ ದೀಪಕ್; ವಿಡಿಯೋ ನೋಡಿ

ಗಾಯಾಳುಗಳನ್ನು ಬಾಂದ್ರಾದಲ್ಲಿ ವರ್ಲಿ ಲೇನ್‌ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗ, ಅತಿವೇಗದಿಂದ ಬಂದ ಕಾರೊಂದು ನಿಂತಿದ್ದ ವಾಹನಗಳಿಗೆ ಢಿಕ್ಕಿ ಹೊಡೆದು ಐದು ಜನರ ಸಾವಿಗೆ ಕಾರಣವಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ.

Advertisement

ಅಪಘಾತದ ನಂತರ ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಅಧಿಕಾರಿಗಳು ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಮುಚ್ಚಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next