Advertisement

ಢಿಕ್ಕಿ: ಗಾಯಾಳು ಅಪರಿಚಿತ ವ್ಯಕ್ತಿ ಸಾವು

11:34 PM Jun 09, 2023 | Team Udayavani |

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಯುನಿಟಿ ಹಾಲ್‌ ಬಳಿ ಟೋಯಿಂಗ್‌ ವಾಹನ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ವೃದ್ಧರೋರ್ವರು ಚಿಕಿತ್ಸೆ ಫಲಕಾರಿಯಾಗದೆ ನಗರದ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಮಂಗಳೂರು ಕಡೆಯಿಂದ ತಲಪಾಡಿ ಕಡೆ ಹೋಗುವ ಹೆದ್ದಾರಿಯಲ್ಲಿ ವೃದ್ಧರೋರ್ವರು ಕೈಯಲ್ಲಿ ಚೀಲ ಹಿಡಿದುಕೊಂಡು ರಸ್ತೆಯ ಬಲಭಾಗದ ಡಿವೈಡರ್‌ ಕಡೆಗೆ ಹೋಗುತ್ತಿದ್ದಾಗ ಮಂಗಳೂರಿನಿಂದ ಅತೀ ವೇಗವಾಗಿ ತೊಕ್ಕೊಟ್ಟು ಕಡೆ ಸಂಚರಿಸುತ್ತಿದ್ದ ಟೋಯಿಂಗ್‌ ವಾಹನ ಢಿಕ್ಕಿ ಹೊಡದು ಗಂಭೀರ ಗಾಯಗೊಂಡಿದ್ದರು.
ಟೋಯಿಂಗ್‌ ಚಾಲಕ ಶಿವರಾಜ್‌ ಆಳ್ವ ಗಾಯಗೊಂಡಿದ್ದ ವ್ಯಕ್ತಿಯನ್ನು ಸಹಾರ ಆಸ್ಪತ್ರೆಗೆ ರಿಕ್ಷಾದಲ್ಲಿ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು 60 ವಯಸ್ಸಿನ ಈ ವ್ಯಕ್ತಿಯ ಕುತ್ತಿಗೆ ಮತ್ತು ಸೊಂಟದ ಮೇಲೆ ಕಪ್ಪು ಎಳ್ಳು ಮಚ್ಚೆ ಇದೆ. ಕೈಯಲ್ಲಿ ಮುರುಗಾ ಚಿತ್ರದ ಹಚ್ಚೆ ಹಾಕಿಸಿಕೊಂಡಿದ್ದು, ಮೃತದೇಹ ವೆನ್ಲಾಕ್‌ ಆಸ್ಪತ್ರೆಯ ಶವಾಗಾರದಲ್ಲಿದ್ದು, ಮಂಗಳೂರು ಸಂಚಾರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next