Advertisement

ಅ.7ಕ್ಕೆ ವಿಚಾರಣೆಗೆ ಬನ್ನಿ: ಡಿ.ಕೆ.ಶಿವಕುಮಾರ್‌ಗೆ ಇ.ಡಿ. ಸಮನ್ಸ್‌

08:42 PM Oct 02, 2022 | Team Udayavani |

ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

Advertisement

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲಿ ಉಂಟಾಗಿದೆ ಎಂದು ಆರೋಪಿಸಲಾಗಿರುವ ಅಕ್ರಮ ಹಣಕಾಸು ವರ್ಗಾವಣೆಗೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯಲಿದೆ ಎಂದು ಇ.ಡಿ.ಮೂಲಗಳು ಭಾನುವಾರ ತಿಳಿಸಿವೆ.

ಶಿವಕುಮಾರ್‌ ಅವರನ್ನು ಸೆ.7ರಂದು ಅಕ್ರಮ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇ.ಡಿ. ವಿಚಾರಣೆ ನಡೆಸಿತ್ತು. ಕರ್ನಾಟಕದಲ್ಲಿ ವಯನಾಡ್‌ ಸಂಸದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಭಾರತ್‌ ಜೋಡೋ ಯಾತ್ರೆ ನಡೆಯುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next