Advertisement

ಕಳವಿಗೆ ಬಂದು ಮಹಿಳೆಯ ಕಿವಿ ಕತ್ತರಿಸಿದ ಖದೀಮರು

11:21 PM Oct 20, 2020 | mahesh |

ರಾಯಚೂರು: ತಾಲೂಕಿನ ಕುಕುನುರು ಗ್ರಾಮದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ಮೂವರು ಖದೀಮರು ನಗದು ಚಿನ್ನಾಭರಣ ಕಳವು ಮಾಡಿದ್ದು, ಇದಕ್ಕೆ ಅಡ್ಡಿಪಡಿಸಲು ಬಂದ ಮಹಿಳೆ ಕಿವಿಯನ್ನೇ ಕತ್ತರಿಸಿದ ಪ್ರಸಂಗ ನಡೆದಿದೆ.

Advertisement

ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಕಳ್ಳತನಕ್ಕೆ ಆಗಮಿಸಿದ್ದಾರೆ. ಗ್ರಾಮದ ಹನುಮಂತ್ರಾಯ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದು ಹಣ ನಗದು ಸೇರಿದಂತೆ ಕೆಲ ದಾಖಲೆಗಳನ್ನು ಕದಿದ್ದಾರೆ. ಈ ವೇಳೆ ಕಳ್ಳತ ಗುಂಪಿನಲ್ಲಿದ್ದ ಅದೇ ಗ್ರಾಮದ ಮನೋಜ್ ಎನ್ನುವ ಯುವಕನನ್ನು ಹಿಡಿದ ಗ್ರಾಮಸ್ಥರು ಗಿಡಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಖದೀಮರ ತಂಡ ಕಳೆದ ಕೆಲ ದಿನಗಳಿಂದ ಕುಕುನೂರು ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಕಳ್ಳತನ ಮಾಡುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next