Advertisement

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

12:10 PM May 16, 2024 | Team Udayavani |

ವಾರಾಣಸಿ: ಪ್ರಧಾನಿ ಮೋದಿ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

Advertisement

ಏಳನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಮೇ 14 ಕೊನೆಯ ದಿನವಾಗಿತ್ತು. ಹಾಗಾಗಿ ಶ್ಯಾಮ್ ರಂಗೀಲಾ ಅವರು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರವೇ ನಾಮಪತ್ರ ಸಲ್ಲಿಸಿದ್ದರು. ಆದರೆ ಅಫಿಡವಿಟ್ ಸಲ್ಲಿಸದ ಕಾರಣ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತವಾಗಿದೆ ಎಂದು ಹೇಳಲಾಗುತ್ತಿದೆ.

ತಾನು ನಾಮಪತ್ರದ ಅರ್ಜಿಯನ್ನು ಪಡೆಯಲು ತೊಂದರೆ ಎದುರಿಸುತ್ತಿದ್ದೇನೆ, ಅಧಿಕಾರಿಗಳು ನಾಮಪತ್ರದ ಅರ್ಜಿಯನ್ನು ಕೊಡುತ್ತಿಲ್ಲ ಎಂದು ಆರೋಪಿಸಿದ್ದರು. “ಕೇವಲ 24 ಗಂಟೆಯಲ್ಲಿ ನನ್ನ ನಾಮಪತ್ರವನ್ನು ತಿರಸ್ಕೃತಗೊಂಡಿದೆ ಇದರ ಅರ್ಥ ನನ್ನನ್ನು ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧಿಸಲು ಬಿಡಬಾರದು ಎಂದು ಮೊದಲೇ ನಿರ್ಧರಿಸಲಾಗಿದೆ ಎಂಬುದು ಸ್ಪಷ್ಟವಾಗಿದೆ ಆದರೆ ನನ್ನ ಜೊತೆಗಿದ್ದ ಬಂದುಗಳಿಗೆ ನನ್ನ ಧನ್ಯವಾದಗಳನ್ನು ತಿಳಿಸಲು ಇಚ್ಛೆ ಪಡುತ್ತೇನೆ, ಸಾಧ್ಯವಾದರೆ ಮುಂದಿನ ಬಾರಿ ಚುನಾವಣೆಗೆ ನಿಲ್ಲಲು ಎಲ್ಲ ರೀತಿಯ ತಯಾರಿ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಕೊನೆಯ ದಿನ ಹಲವು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ:
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಹಲವು ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ಬಿಜೆಪಿ ಅಭ್ಯರ್ಥಿ ಪ್ರಧಾನಿ ಮೋದಿ ಅವರಲ್ಲದೆ, ಜನತಾ ಪಕ್ಷದ ವಿನಯ್ ಕುಮಾರ್ ತ್ರಿಪಾಠಿ, ಬಿಜೆಪಿಯ ಸುರೇಂದ್ರ ನಾರಾಯಣ್ ಸಿಂಗ್, ಸ್ವತಂತ್ರ ಅಭ್ಯರ್ಥಿಗಳಾದ ದಿನೇಶ್ ಕುಮಾರ್ ಯಾದವ್, ರೀನಾ ರೈ, ನೇಹಾ ಜೈಸ್ವಾಲ್, ಅಜಿತ್ ಕುಮಾರ್ ಜೈಸ್ವಾಲ್, ಅಶೋಕ್ ಕುಮಾರ್ ಪಾಂಡೆ-ಸ್ವತಂತ್ರ, ಸಂದೀಪ್ ತ್ರಿಪಾಠಿ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next