Advertisement

ಅಮಿತ್ ಶಾ ಮತ್ತು ಹಿಂದೂ ದೇವತೆಗಳ ಅಪಹಾಸ್ಯ ಮಾಡಿದ ಕಾಮಿಡಿಯನ್ ಮುನಾವರ್ ಫಾರೂಕಿ ಬಂಧನ

08:38 PM Jan 03, 2021 | Team Udayavani |

ಮುಂಬೈ: ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕುರಿತಾಗಿ ಅವಹೇಳನಕಾರಿ ಮಾತುಗಳನ್ನಾಡಿದ ಹಿನ್ನಲೆಯಲ್ಲಿ ಗುಜರಾತ್ ಮೂಲದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಸೇರಿದಂತೆ ನಾಲ್ವರನ್ನು  ಪೊಲೀಸರು ಬಂಧಿಸಿದ್ದಾರೆ.

Advertisement

ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಲಕ್ಷ್ಮಣ್ ಸಿಂಗ್ ಗೌರ್ ಅವರ ಪುತ್ರ ಏಕಲವ್ಯ ಸಿಂಗ್ ಗೌರ್ ದೂರು ದಾಖಲಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ:ಕೇವಲ ಅಧಿಕಾರಕ್ಕಾಗಿ ಆಡಳಿತ ನಡೆಸುವ ಪಕ್ಷ ಎಂದರೇ ಅದು ಬಿಜೆಪಿ: ರಾಮಲಿಂಗಾರೆಡ್ಡಿ

ಇಂಧೋರ್ ನ ಡೂಕನ್ ಎಂಬಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕೆಫೆಯೊಂದರಲ್ಲಿ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಅವಹೇಳನಕಾರಿಯಾದ ಮಾತುಗಳಿಂದ ಹಿಂದೂ ದೇವರುಗಳನ್ನು ಹಾಗೂ ಕೆಂದ್ರ ಗೃಹ ಸಚಿವರನ್ನು ನಿಂದಿಸಿದ್ದು ಈ ವಿಚಾರವಾಗಿ ಪ್ರತಿಭಟಿಸಿದ್ದ ಏಕಲವ್ಯ ಅವರು ಸಂಘಟಕರಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಈ ಕುರಿತಾಗಿ ಮಾಧ್ಯಮಕ್ಕೆ  ಮಾಹಿತಿ ನೀಡಿದ ಏಕಲವ್ಯ,   ಆಯೋಜಕರಿಗೆ ದೂರು ನೀಡಿದರೂ ಯಾವುದೇ ಪ್ರತಿಕ್ರಿಯೆ ತೋರದ  ಹಿನ್ನೆಲೆಯಲ್ಲಿ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕಾಯಿತು ಎಂದಿದ್ದಾರೆ.

Advertisement

ಇದನ್ನೂ ಓದಿ:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ; ಯಡಿಯೂರಪ್ಪ ಅವರೇ ಸುಪ್ರೀಂ: ಅರುಣ್ ಸಿಂಗ್

ಸದ್ಯ ಕಾಮಿಡಿಯನ್ ಮುನಾವರ್ ಫಾರೂಕಿ  ಅವರನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next