Advertisement

Comedy ತುಕಾಲಿ ಸಂತೋಷ್ ಹೊಸ ಕಾರು ಅಪಘಾತ : ಓರ್ವನಿಗೆ ಗಾಯ

10:04 PM Mar 13, 2024 | Team Udayavani |

ಕುಣಿಗಲ್ : ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಆಟೋ ನಡುವೆ ಢಿಕ್ಕಿ ಸಂಭವಿಸಿ ಓರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ರಾಜ್ಯ ಹೆದ್ದಾರಿ 33 ಕುರುಡಿಹಳ್ಳಿ ಬಳಿ ನಡೆದಿದೆ.

Advertisement

ಆಟೋ ಚಾಲಕ ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (44) ಗಾಯಗೊಂಡ ವ್ಯಕ್ತಿಯಾಗಿದ್ದು ಕುಣಿಗಲ್ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಕಾಲಿ ಸಂತೋಷ್ ಹಾಗೂ ಪತ್ನಿ ಮಾನಸ ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next